<p><strong>ರಾಮನಗರ</strong>: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ಸತತ ಗೈರು ಹಾಗೂ ದುರ್ನಡತೆ ಆರೋಪದ ಮೇಲೆ ಸೋಮವಾರ ತನ್ನ ಆರು ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.</p>.<p>ಈ ಸಂಬಂಧ ಕಾರ್ಖಾನೆಯು ನೋಟಿಸ್ ಮೂಲಕ ವಿವರಣೆ ನೀಡಿದೆ. ‘ನಾಲ್ವರು ಕಾರ್ಮಿಕರು ಸೇವೆಗೆ ಸತತಗೈರಾಗುತ್ತಿದ್ದರು. ನೋಟಿಸ್ ನೀಡಿದ್ದರೂ ಅವರು ತಿದ್ದಿಕೊಂಡಿರಲಿಲ್ಲ. ಅಂತೆಯೇ ಇಬ್ಬರು ಕಾರ್ಮಿಕರು ಕಂಪನಿಯ ಇತರರೊಂದಿಗೆ ದುರ್ನಡತೆ ತೋರುತ್ತಿದ್ದರು. ಈ ಎಲ್ಲ ಆರೋಪಗಳ ತನಿಖೆಗೆ ಸ್ವತಂತ್ರ ಸಮಿತಿಯನ್ನು ರಚಿಸಲಾಗಿತ್ತು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ಆರೂ ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ’ ಎಂದು ಕಂಪನಿಯ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.</p>.<p>ಈ ಕುರಿತು ಟೊಯೊಟಾ ಕಾರ್ಮಿಕರ ಸಂಘವು ಪ್ರತಿಕ್ರಿಯೆ ನೀಡಿದ್ದು ‘ಕಾರ್ಮಿಕರ ಪ್ರತಿಭಟನೆಯ ಸಂದರ್ಭದಲ್ಲಿ ನಮ್ಮನ್ನು ಬೆದರಿಸುವ ಸಲುವಾಗಿಯೇ ಹಳೆಯ ಪ್ರಕರಣಗಳಲ್ಲಿ ಹಲವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಆದರೆ ಇದ್ಯಾವುದಕ್ಕೂ ಹೆದರದೇ ಪ್ರತಿಭಟನೆ ಮುಂದುವರಿಯಲಿದೆ’ ಎಂದು ಹೇಳಿದೆ.</p>.<p>ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಿರುವ ಕುರಿತು ಪ್ರತಿಕ್ರಿಯೆ ಪಡೆಯಲು ಕಂಪನಿಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.</p>.<p><strong>ಸಚಿವರ ಭೇಟಿಗೆ ನಿರ್ಧಾರ</strong>: ದಕ್ಷಿಣ ಭಾರತದ ಇತರ ವಾಹನ ತಯಾರಿಕಾ ಕಂಪನಿಗಳ ಕಾರ್ಮಿಕರ ಜೊತೆಗೂಡಿ ಕೇಂದ್ರ ಕಾರ್ಮಿಕ ಸಚಿವರನ್ನು ಭೇಟಿ ಮಾಡಲು ಬಿಡದಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ (ಟಿಕೆಎಂ) ಕಾರ್ಮಿಕ ಸಂಘ ಮುಂದಾಗಿದೆ.</p>.<p>ಕಾರ್ಮಿಕರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿರುವ ಹಿನ್ನೆಲೆಯಲ್ಲಿ, ದಕ್ಷಿಣ ಭಾರತ ಮಟ್ಟದ ಕಾರು ತಯಾರಿಕಾ ಕಂಪನಿಗಳ ಯೂನಿಯನ್ ಫೆಡರೇಶನ್ ಮುಖಂಡರ ನೇತೃತ್ವದಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.</p>.<p>ಒಟ್ಟು 17 ಬಹುರಾಷ್ಟ್ರೀಯ ಕಂಪನಿಗಳ ಕಾರ್ಮಿಕ ಪ್ರತಿನಿಧಿಗಳು ಹಾಗೂ ಕಾರ್ಮಿಕ ಪರ ಸಂಘಟನೆಗಳ ಮುಖಂಡರ ಜೊತೆಗೂಡಿ ನಿಯೋಗ ಒಯ್ದು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗುವುದು. ಟೊಯೊಟಾ ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಕೋರಲಾಗುವುದು. ಆದರೆ ಈ ಬಗ್ಗೆ ಇನ್ನಷ್ಟು ಚರ್ಚೆ ಆಗಬೇಕಿದ್ದು, ಭೇಟಿಯ ದಿನಾಂಕ ಅಂತಿಮಗೊಂಡಿಲ್ಲ</p>.<p>ಎಂದು ಟಿಕೆಎಂ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ಚಕ್ಕೆರೆ ಹಾಗೂ ಕಾರ್ಯದರ್ಶಿ ಬಸವರಾಜ ಹವಾಲ್ದಾರ್ ತಿಳಿಸಿದರು.</p>.<p>‘ಟೊಯೊಟಾ ಕಾರ್ಖಾನೆಯಲ್ಲಿ ಹೊಸತಾಗಿ ತಂದಿರುವ ಕಾರ್ಮಿಕ ಶೋಷಣೆ ಕಾನೂನುಗಳನ್ನೇ ಉಳಿದ ಕಾರ್ಖಾನೆಗಳು ಅನುಸರಿಸಲು ಹೊರಟಿವೆ. ಇದನ್ನು ವಿರೋಧಿಸಿ ಇತರ ಕಾರು ಉತ್ಪಾದನಾ ಕಂಪನಿಗಳ</p>.<p>ಕಾರ್ಮಿಕ ಸಂಘಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿವೆ. ಪ್ರಧಾನಿ ನರೇಂದ್ರ ಅವರನ್ನೂ ಭೇಟಿ ಮಾಡಲು ಪ್ರಯತ್ನಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ಸತತ ಗೈರು ಹಾಗೂ ದುರ್ನಡತೆ ಆರೋಪದ ಮೇಲೆ ಸೋಮವಾರ ತನ್ನ ಆರು ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.</p>.<p>ಈ ಸಂಬಂಧ ಕಾರ್ಖಾನೆಯು ನೋಟಿಸ್ ಮೂಲಕ ವಿವರಣೆ ನೀಡಿದೆ. ‘ನಾಲ್ವರು ಕಾರ್ಮಿಕರು ಸೇವೆಗೆ ಸತತಗೈರಾಗುತ್ತಿದ್ದರು. ನೋಟಿಸ್ ನೀಡಿದ್ದರೂ ಅವರು ತಿದ್ದಿಕೊಂಡಿರಲಿಲ್ಲ. ಅಂತೆಯೇ ಇಬ್ಬರು ಕಾರ್ಮಿಕರು ಕಂಪನಿಯ ಇತರರೊಂದಿಗೆ ದುರ್ನಡತೆ ತೋರುತ್ತಿದ್ದರು. ಈ ಎಲ್ಲ ಆರೋಪಗಳ ತನಿಖೆಗೆ ಸ್ವತಂತ್ರ ಸಮಿತಿಯನ್ನು ರಚಿಸಲಾಗಿತ್ತು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ಆರೂ ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ’ ಎಂದು ಕಂಪನಿಯ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.</p>.<p>ಈ ಕುರಿತು ಟೊಯೊಟಾ ಕಾರ್ಮಿಕರ ಸಂಘವು ಪ್ರತಿಕ್ರಿಯೆ ನೀಡಿದ್ದು ‘ಕಾರ್ಮಿಕರ ಪ್ರತಿಭಟನೆಯ ಸಂದರ್ಭದಲ್ಲಿ ನಮ್ಮನ್ನು ಬೆದರಿಸುವ ಸಲುವಾಗಿಯೇ ಹಳೆಯ ಪ್ರಕರಣಗಳಲ್ಲಿ ಹಲವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಆದರೆ ಇದ್ಯಾವುದಕ್ಕೂ ಹೆದರದೇ ಪ್ರತಿಭಟನೆ ಮುಂದುವರಿಯಲಿದೆ’ ಎಂದು ಹೇಳಿದೆ.</p>.<p>ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಿರುವ ಕುರಿತು ಪ್ರತಿಕ್ರಿಯೆ ಪಡೆಯಲು ಕಂಪನಿಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.</p>.<p><strong>ಸಚಿವರ ಭೇಟಿಗೆ ನಿರ್ಧಾರ</strong>: ದಕ್ಷಿಣ ಭಾರತದ ಇತರ ವಾಹನ ತಯಾರಿಕಾ ಕಂಪನಿಗಳ ಕಾರ್ಮಿಕರ ಜೊತೆಗೂಡಿ ಕೇಂದ್ರ ಕಾರ್ಮಿಕ ಸಚಿವರನ್ನು ಭೇಟಿ ಮಾಡಲು ಬಿಡದಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ (ಟಿಕೆಎಂ) ಕಾರ್ಮಿಕ ಸಂಘ ಮುಂದಾಗಿದೆ.</p>.<p>ಕಾರ್ಮಿಕರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿರುವ ಹಿನ್ನೆಲೆಯಲ್ಲಿ, ದಕ್ಷಿಣ ಭಾರತ ಮಟ್ಟದ ಕಾರು ತಯಾರಿಕಾ ಕಂಪನಿಗಳ ಯೂನಿಯನ್ ಫೆಡರೇಶನ್ ಮುಖಂಡರ ನೇತೃತ್ವದಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.</p>.<p>ಒಟ್ಟು 17 ಬಹುರಾಷ್ಟ್ರೀಯ ಕಂಪನಿಗಳ ಕಾರ್ಮಿಕ ಪ್ರತಿನಿಧಿಗಳು ಹಾಗೂ ಕಾರ್ಮಿಕ ಪರ ಸಂಘಟನೆಗಳ ಮುಖಂಡರ ಜೊತೆಗೂಡಿ ನಿಯೋಗ ಒಯ್ದು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗುವುದು. ಟೊಯೊಟಾ ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಕೋರಲಾಗುವುದು. ಆದರೆ ಈ ಬಗ್ಗೆ ಇನ್ನಷ್ಟು ಚರ್ಚೆ ಆಗಬೇಕಿದ್ದು, ಭೇಟಿಯ ದಿನಾಂಕ ಅಂತಿಮಗೊಂಡಿಲ್ಲ</p>.<p>ಎಂದು ಟಿಕೆಎಂ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ಚಕ್ಕೆರೆ ಹಾಗೂ ಕಾರ್ಯದರ್ಶಿ ಬಸವರಾಜ ಹವಾಲ್ದಾರ್ ತಿಳಿಸಿದರು.</p>.<p>‘ಟೊಯೊಟಾ ಕಾರ್ಖಾನೆಯಲ್ಲಿ ಹೊಸತಾಗಿ ತಂದಿರುವ ಕಾರ್ಮಿಕ ಶೋಷಣೆ ಕಾನೂನುಗಳನ್ನೇ ಉಳಿದ ಕಾರ್ಖಾನೆಗಳು ಅನುಸರಿಸಲು ಹೊರಟಿವೆ. ಇದನ್ನು ವಿರೋಧಿಸಿ ಇತರ ಕಾರು ಉತ್ಪಾದನಾ ಕಂಪನಿಗಳ</p>.<p>ಕಾರ್ಮಿಕ ಸಂಘಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿವೆ. ಪ್ರಧಾನಿ ನರೇಂದ್ರ ಅವರನ್ನೂ ಭೇಟಿ ಮಾಡಲು ಪ್ರಯತ್ನಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>