ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಬಿಜೆಪಿಯ ಕುಮಾರ್ ಬಂಗಾರಪ್ಪ ಪ್ರಶ್ನೆಗೆ ಉತ್ತರಿಸಿದ ಅವರು, ‘ತಾಲ್ಲೂಕು ಪಂಚಾಯಿತಿಗೆ ಹೆಚ್ಚು ಮೌಲ್ಯ ಇಲ್ಲ ಎಂಬ ಕಾರಣಕ್ಕೆ ಅನೇಕ ಸದಸ್ಯರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಿಂತು ಗೆದ್ದಿದ್ದಾರೆ. ಎರಡು ಸ್ತರದ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಶಾಸಕರು ಸಲಹೆಗಳನ್ನು ನೀಡಬೇಕು’ ಎಂದು ವಿನಂತಿಸಿದರು.