‘ತಮಿಳುನಾಡಿನ ರೈತ ನಾಯಕ ಸೆಲ್ವಮುತ್ತು, ‘ಹೊಸ ಕಾಯ್ದೆಗಳು ರೈತರ ಬದುಕನ್ನು ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ನೂಕುವ ಹಾದಿಯಲ್ಲಿವೆ’ ಎಂದರು. ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಉಪಾಧ್ಯಕ್ಷ ರಜಾಕ್ ಉಸ್ತಾದ್, ‘ಬರ ಮತ್ತು ನೆರೆ ಹಾವಳಿಯಿಂದ ಬಸವಳಿದಿರುವ ಉತ್ತರ ಕರ್ನಾಟಕದ ರೈತಾಪಿ ವರ್ಗಕ್ಕೆ ಇನ್ನೂ ಸಮರ್ಪಕವಾಗಿ ನೆರವು ಲಭಿಸಿಲ್ಲ’ ಎಂದರು.