ವಿಧಾನಪರಿಷತ್ನಲ್ಲಿ ಕಾಂಗ್ರೆಸ್ಸಿನ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ‘ವಸೂಲು ಮಾಡಿದ ದಂಡದ ಮೊತ್ತವನ್ನು ಸಂಚಾರ ಸುಧಾರಣೆಗಾಗಿ ಸುಧಾರಿತ ತಂತ್ರಜ್ಞಾನ ಅಳವಡಿಸಲು ಬಳಸಲಾಗುತ್ತದೆ. ಮುಖ್ಯವಾಗಿ, ಸಂಚಾರ ಸೂಚನಾ ಫಲಕ, ಸಿ.ಸಿ ಟಿವಿ ಕ್ಯಾಮೆರಾ, ಹೆದ್ದಾರಿ ಗಸ್ತು ವಾಹನ, ಇಂಟರ್ಸೆಪ್ಟರ್ ವಾಹನ ಖರೀದಿ, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲು ಬಳಸುವ ಪಿಡಿಎ ಸಾಧನ ಮುಂತಾದ ಪರಿಕರಗಳನ್ನು ಖರೀದಿಸಲು ಬಳಕೆ ಮಾಡಲಾಗುತ್ತದೆ’ ಎಂದಿದ್ದಾರೆ.