<p><strong>ಬೆಂಗಳೂರು</strong>: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆ ರೂಪಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಇಲಾಖೆಯ ಕೇಂದ್ರ ಕಚೇರಿಯ ಮುಂಭಾಗದಲ್ಲಿ ನೂರಾರು ಉಪನ್ಯಾಸಕರು ಸೋಮವಾರ ಧರಣಿ ನಡೆಸಿದರು.</p>.<p>ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎಸ್.ವಿ. ಸಂಕನೂರು, ಬೋಜೇಗೌಡ ಮತ್ತು ಹನುಮಂತಪ್ಪ ನಿರಾಣಿ ಧರಣಿ ಸ್ಥಳಕ್ಕೆ ಬಂದು ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿ, ‘ ನಿಮ್ಮ ಬೇಡಿಕೆಗಳ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಕಚೇರಿಯ ಆವರಣ ಪ್ರವೇಶಿಸಲು ಪೊಲೀಸರುಅವಕಾಶ ನೀಡದಕಾರಣ ಮುಂಭಾಗದರಸ್ತೆಯಲ್ಲಿಯೇ ಉಪನ್ಯಾಸಕರು ಧರಣಿಕುಳಿತರು.ಇದೇ ವೇಳೆ ಕಚೇರಿಗೆ ಬಂದ ಇಲಾಖೆಯ ನಿರ್ದೇಶಕಿ ಸ್ನೇಹಲ್ ಅವರನ್ನು ತಡೆದ ಉಪನ್ಯಾಸಕರು,ಪೊಲೀಸರಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಉಪನ್ಯಾಸಕರ ಸಮಸ್ಯೆಗಳನ್ನು ಶ್ರೀಕಂಠೇಗೌಡ ಮತ್ತು ಸಂಕನೂರು ಅವರು ನಿರ್ದೇಶಕರಿಗೆ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆ ರೂಪಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಇಲಾಖೆಯ ಕೇಂದ್ರ ಕಚೇರಿಯ ಮುಂಭಾಗದಲ್ಲಿ ನೂರಾರು ಉಪನ್ಯಾಸಕರು ಸೋಮವಾರ ಧರಣಿ ನಡೆಸಿದರು.</p>.<p>ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎಸ್.ವಿ. ಸಂಕನೂರು, ಬೋಜೇಗೌಡ ಮತ್ತು ಹನುಮಂತಪ್ಪ ನಿರಾಣಿ ಧರಣಿ ಸ್ಥಳಕ್ಕೆ ಬಂದು ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿ, ‘ ನಿಮ್ಮ ಬೇಡಿಕೆಗಳ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಕಚೇರಿಯ ಆವರಣ ಪ್ರವೇಶಿಸಲು ಪೊಲೀಸರುಅವಕಾಶ ನೀಡದಕಾರಣ ಮುಂಭಾಗದರಸ್ತೆಯಲ್ಲಿಯೇ ಉಪನ್ಯಾಸಕರು ಧರಣಿಕುಳಿತರು.ಇದೇ ವೇಳೆ ಕಚೇರಿಗೆ ಬಂದ ಇಲಾಖೆಯ ನಿರ್ದೇಶಕಿ ಸ್ನೇಹಲ್ ಅವರನ್ನು ತಡೆದ ಉಪನ್ಯಾಸಕರು,ಪೊಲೀಸರಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಉಪನ್ಯಾಸಕರ ಸಮಸ್ಯೆಗಳನ್ನು ಶ್ರೀಕಂಠೇಗೌಡ ಮತ್ತು ಸಂಕನೂರು ಅವರು ನಿರ್ದೇಶಕರಿಗೆ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>