ಬೆಂಗಳೂರು: ಕೆಎಎಸ್ ಆಯ್ಕೆ ಶ್ರೇಣಿಯ ಅಧಿಕಾರಿಯಾಗಿರುವ ಕೆಆರ್ಐಡಿಎಲ್ ಮುಖ್ಯ ಆಡಳಿತಾಧಿಕಾರಿ ಎ.ಎಂ. ಯೋಗೀಶ್ ಅವರನ್ನು ಮೈಸೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ (ಭೂ ನಿರ್ವಹಣೆ, ಯೋಜನೆ, ಇತರೆ) ವರ್ಗಾವಣೆ ಮಾಡಲಾಗಿದೆ.
ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಗಳಾದ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಬೂದೆಪ್ಪ ಎಚ್.ಬಿ ಅವರನ್ನು ಕೆಆರ್ಐಡಿಎಲ್ ಮುಖ್ಯ ಆಡಳಿತಾಧಿಕಾರಿಯಾಗಿ ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಶಾಂತಾ ಎಲ್. ಹುಲ್ಮನಿ ಅವರನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ.