ಬೆಂಗಳೂರು: ಸಾರಿಗೆ ಇಲಾಖೆಯ ಸಕಾಲ ಸೇವೆಗಳಾದ ವಾಹನಗಳ ಮಾಲಿಕತ್ವ ವರ್ಗಾವಣೆ, ಸರಕು ಸಾಗಣೆ ರಹದಾರಿ ಮತ್ತು ವಾಹನ ಅರ್ಹತಾ ಪ್ರಮಾಣಪತ್ರಗಳ ಸೇವೆ ಪಡೆಯಲು ಇನ್ನು ಮುಂದೆ ಕಡ್ಡಾಯವಾಗಿ ಆನ್ಲೈನ್/ ಸೇವಾಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವ್ಯಾಪಾರ ಸರಳೀಕರಣ ಮತ್ತು ವ್ಯವಹಾರ ಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರುವ ಉದ್ದೇಶದಿಂದ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಅಧಿಸೂಚಿತ ಸಕಾಲ ಸೇವೆಗಳನ್ನು ಆನ್ಲೈನ್ ಮೂಲಕ ನಿರ್ವಹಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.