<p><strong>ಬೆಂಗಳೂರು: </strong>ಮುಷ್ಕರನಿರತ ಸಾರಿಗೆ ನಿಗಮಗಳ ನೌಕರರ ಮನವೊಲಿಕೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತೊಂದು ಸುತ್ತಿನ ಸಭೆ ಆರಂಭಿಸಿದ್ದಾರೆ.</p>.<p>ನಾಲ್ಕು ಕಾರ್ಮಿಕ ಸಂಘಟನೆಗಳ ಮುಖಂಡರ ಜತೆ ಸಾರಿಗೆ ನೌಕರರ ಕೂಟದ ಮುಖಂಡರನ್ನೂ ಸಭೆಗೆ ಆಹ್ವಾನಿಸಲಾಗಿದೆ. ನೌಕರರ ಬೇಡಿಕೆ ಮತ್ತು ಸರ್ಕಾರ ಕೈಗೊಂಡಿರುವ ನಿರ್ಧಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.</p>.<p>ಮಾತುಕತೆ ಕುರಿತು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಕ್ರಿಯಿಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, 'ಎಲ್ಲ ಬೇಡಿಕೆ ಒಪ್ಪಿದರೆ ಮಾತ್ರ ಮುಷ್ಕರ ಕೈಬಿಡುವ ಕುರಿತು ತೀರ್ಮಾನಿಸಲಾಗುವುದು. ಇಲ್ಲವಾದೃ ಹೋರಾಟ ಮುಂದುವರಿಯಲಿದೆ' ಎಂದರು.</p>.<p>ಸರ್ಕಾರದ ಮುಂದೆ ಹತ್ತು ಬೇಡಿಕೆಗಳನ್ನು ಇಡಲಾಗಿದೆ. ಸರ್ಕಾರಿ ನೌಕರರು ಎಂದು ಪರಿಗಣಿಸುವ ಬೇಡಿಕೆ ಹೊರತಾಗಿ ಒಂಭತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಮಾಹಿತಿ ಬಂದಿದೆ. ಮೊದಲನೇ ಬೇಡಿಕೆಯನ್ನು ಬದಿಗಿಟ್ಟು ನಿರ್ಧಾರ ಕೈಗೊಳ್ಳುವುದಕ್ಕೆ ನೌಕರರ ಸಹಮತ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಷ್ಕರನಿರತ ಸಾರಿಗೆ ನಿಗಮಗಳ ನೌಕರರ ಮನವೊಲಿಕೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತೊಂದು ಸುತ್ತಿನ ಸಭೆ ಆರಂಭಿಸಿದ್ದಾರೆ.</p>.<p>ನಾಲ್ಕು ಕಾರ್ಮಿಕ ಸಂಘಟನೆಗಳ ಮುಖಂಡರ ಜತೆ ಸಾರಿಗೆ ನೌಕರರ ಕೂಟದ ಮುಖಂಡರನ್ನೂ ಸಭೆಗೆ ಆಹ್ವಾನಿಸಲಾಗಿದೆ. ನೌಕರರ ಬೇಡಿಕೆ ಮತ್ತು ಸರ್ಕಾರ ಕೈಗೊಂಡಿರುವ ನಿರ್ಧಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.</p>.<p>ಮಾತುಕತೆ ಕುರಿತು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಕ್ರಿಯಿಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, 'ಎಲ್ಲ ಬೇಡಿಕೆ ಒಪ್ಪಿದರೆ ಮಾತ್ರ ಮುಷ್ಕರ ಕೈಬಿಡುವ ಕುರಿತು ತೀರ್ಮಾನಿಸಲಾಗುವುದು. ಇಲ್ಲವಾದೃ ಹೋರಾಟ ಮುಂದುವರಿಯಲಿದೆ' ಎಂದರು.</p>.<p>ಸರ್ಕಾರದ ಮುಂದೆ ಹತ್ತು ಬೇಡಿಕೆಗಳನ್ನು ಇಡಲಾಗಿದೆ. ಸರ್ಕಾರಿ ನೌಕರರು ಎಂದು ಪರಿಗಣಿಸುವ ಬೇಡಿಕೆ ಹೊರತಾಗಿ ಒಂಭತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಮಾಹಿತಿ ಬಂದಿದೆ. ಮೊದಲನೇ ಬೇಡಿಕೆಯನ್ನು ಬದಿಗಿಟ್ಟು ನಿರ್ಧಾರ ಕೈಗೊಳ್ಳುವುದಕ್ಕೆ ನೌಕರರ ಸಹಮತ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>