ಸಾರಿಗೆ ನೌಕರರ ಮುಷ್ಕರ: ಮತ್ತೊಂದು ಸುತ್ತಿನ ಮಾತುಕತೆ

ಬೆಂಗಳೂರು: ಮುಷ್ಕರನಿರತ ಸಾರಿಗೆ ನಿಗಮಗಳ ನೌಕರರ ಮನವೊಲಿಕೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತೊಂದು ಸುತ್ತಿನ ಸಭೆ ಆರಂಭಿಸಿದ್ದಾರೆ.
ನಾಲ್ಕು ಕಾರ್ಮಿಕ ಸಂಘಟನೆಗಳ ಮುಖಂಡರ ಜತೆ ಸಾರಿಗೆ ನೌಕರರ ಕೂಟದ ಮುಖಂಡರನ್ನೂ ಸಭೆಗೆ ಆಹ್ವಾನಿಸಲಾಗಿದೆ. ನೌಕರರ ಬೇಡಿಕೆ ಮತ್ತು ಸರ್ಕಾರ ಕೈಗೊಂಡಿರುವ ನಿರ್ಧಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಮಾತುಕತೆ ಕುರಿತು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಕ್ರಿಯಿಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, 'ಎಲ್ಲ ಬೇಡಿಕೆ ಒಪ್ಪಿದರೆ ಮಾತ್ರ ಮುಷ್ಕರ ಕೈಬಿಡುವ ಕುರಿತು ತೀರ್ಮಾನಿಸಲಾಗುವುದು. ಇಲ್ಲವಾದೃ ಹೋರಾಟ ಮುಂದುವರಿಯಲಿದೆ' ಎಂದರು.
ಸರ್ಕಾರದ ಮುಂದೆ ಹತ್ತು ಬೇಡಿಕೆಗಳನ್ನು ಇಡಲಾಗಿದೆ. ಸರ್ಕಾರಿ ನೌಕರರು ಎಂದು ಪರಿಗಣಿಸುವ ಬೇಡಿಕೆ ಹೊರತಾಗಿ ಒಂಭತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಾಗಿದೆ ಎಂಬ ಮಾಹಿತಿ ಬಂದಿದೆ. ಮೊದಲನೇ ಬೇಡಿಕೆಯನ್ನು ಬದಿಗಿಟ್ಟು ನಿರ್ಧಾರ ಕೈಗೊಳ್ಳುವುದಕ್ಕೆ ನೌಕರರ ಸಹಮತ ಇಲ್ಲ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.