<p><strong>ಬೆಂಗಳೂರು:</strong> ಸಾರಿಗೆ ಸಂಸ್ಥೆಗಳ ನೌಕರರು ಏ.7ರಿಂದ ಮುಷ್ಕರಕ್ಕೆ ಅಣಿಯಾಗುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಿಗೆ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಪ್ಪಂದದ ತಾತ್ಕಾಲಿಕ ರಹದಾರಿ ನೀಡಲು ಖಾಸಗಿ ಬಸ್, ಮಿನಿ ಬಸ್, ಮ್ಯಾಕ್ಸಿಕ್ಯಾಬ್ ಮಾಲೀಕರಿಂದ ಅರ್ಜಿ ಆಹ್ವಾನಿಸಿದೆ.</p>.<p>ಮುಷ್ಕರದ ಅವಧಿಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಲೋಚಿಸಿದೆ. ಮ್ಯಾಕ್ಸಿಕ್ಯಾಬ್ ಮತ್ತು ಬಸ್ಗಳಿಗೆ ತಾತ್ಕಾಲಿಕ ರಹದಾರಿ ನೀಡಲು ನಿರ್ಧರಿಸಿದೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ರಹದಾರಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.</p>.<p>ಈ ಹಿಂದಿನ ಮುಷ್ಕರದ ವೇಳೆ 9 ಬೇಡಿಕೆಗಳ ಈಡೇರಿಕೆಗೆ ಸರ್ಕಾರ ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಮತ್ತೊಮ್ಮೆ ಮುಷ್ಕರಕ್ಕೆ ಸಾರಿಗೆ ನೌಕರರ ಕೂಟ ನಿರ್ಧರಿಸಿದೆ. ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿದೆ.</p>.<p>‘8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, 6ನೇ ವೇತನ ಆಯೋಗದ ಜಾರಿಯೊಂದು ಬಾಕಿ ಇದೆ. ಅದಕ್ಕೆ ಸಿದ್ಧತೆಯೂ ನಡೆದಿದೆ’ ಎಂದು ಸರ್ಕಾರ ಹೇಳುತ್ತಿದೆ. 6ನೇ ವೇತನ ಆಯೋಗದ ಶಿಫಾರಸು ಜಾರಿಯ ಬೇಡಿಕೆ ಈಡೇರಿಲ್ಲ. ಹೀಗಾಗಿ ಮುಷ್ಕರ ಅನಿವಾರ್ಯ’ ಎಂದು ಸಾರಿಗೆ ನೌಕರರ ಕೂಟ ಹೇಳಿದೆ.</p>.<p>‘ಸರ್ಕಾರ ಹಟಮಾರಿ ಧೋರಣೆ ಮುಂದುವರಿಸಿದೆ. ನಮ್ಮ ಜತೆ ಮಾತುಕತೆಗೂ ಮುಂದಾಗದ ಸರ್ಕಾರ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಮುಷ್ಕರಕ್ಕೆ ನಾವೂ ಸಿದ್ಧತೆ ಮಾಡುತ್ತಿದ್ದೇವೆ’ ಎಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರಿಗೆ ಸಂಸ್ಥೆಗಳ ನೌಕರರು ಏ.7ರಿಂದ ಮುಷ್ಕರಕ್ಕೆ ಅಣಿಯಾಗುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಿಗೆ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಪ್ಪಂದದ ತಾತ್ಕಾಲಿಕ ರಹದಾರಿ ನೀಡಲು ಖಾಸಗಿ ಬಸ್, ಮಿನಿ ಬಸ್, ಮ್ಯಾಕ್ಸಿಕ್ಯಾಬ್ ಮಾಲೀಕರಿಂದ ಅರ್ಜಿ ಆಹ್ವಾನಿಸಿದೆ.</p>.<p>ಮುಷ್ಕರದ ಅವಧಿಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಲೋಚಿಸಿದೆ. ಮ್ಯಾಕ್ಸಿಕ್ಯಾಬ್ ಮತ್ತು ಬಸ್ಗಳಿಗೆ ತಾತ್ಕಾಲಿಕ ರಹದಾರಿ ನೀಡಲು ನಿರ್ಧರಿಸಿದೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ರಹದಾರಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.</p>.<p>ಈ ಹಿಂದಿನ ಮುಷ್ಕರದ ವೇಳೆ 9 ಬೇಡಿಕೆಗಳ ಈಡೇರಿಕೆಗೆ ಸರ್ಕಾರ ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಮತ್ತೊಮ್ಮೆ ಮುಷ್ಕರಕ್ಕೆ ಸಾರಿಗೆ ನೌಕರರ ಕೂಟ ನಿರ್ಧರಿಸಿದೆ. ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿದೆ.</p>.<p>‘8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, 6ನೇ ವೇತನ ಆಯೋಗದ ಜಾರಿಯೊಂದು ಬಾಕಿ ಇದೆ. ಅದಕ್ಕೆ ಸಿದ್ಧತೆಯೂ ನಡೆದಿದೆ’ ಎಂದು ಸರ್ಕಾರ ಹೇಳುತ್ತಿದೆ. 6ನೇ ವೇತನ ಆಯೋಗದ ಶಿಫಾರಸು ಜಾರಿಯ ಬೇಡಿಕೆ ಈಡೇರಿಲ್ಲ. ಹೀಗಾಗಿ ಮುಷ್ಕರ ಅನಿವಾರ್ಯ’ ಎಂದು ಸಾರಿಗೆ ನೌಕರರ ಕೂಟ ಹೇಳಿದೆ.</p>.<p>‘ಸರ್ಕಾರ ಹಟಮಾರಿ ಧೋರಣೆ ಮುಂದುವರಿಸಿದೆ. ನಮ್ಮ ಜತೆ ಮಾತುಕತೆಗೂ ಮುಂದಾಗದ ಸರ್ಕಾರ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಮುಷ್ಕರಕ್ಕೆ ನಾವೂ ಸಿದ್ಧತೆ ಮಾಡುತ್ತಿದ್ದೇವೆ’ ಎಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>