ಈಗಾಗಲೇ ವಿವಿಧ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಏ. 6ರಂದು ನೌಕರರು ಕುಟುಂಬ ಸದಸ್ಯರೊಂದಿಗೆ ಜಿಲ್ಲೆಯ ಪ್ರಮುಖ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಏ .1ರಂದು ಕಚೇರಿಯಲ್ಲಿ ನೌಕರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಕಾನೂನ ಅಡಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ಸಾರ್ವಜನಿಕರಿಗೆ ಅನಾನುಕೂಲ ಮಾಡಬೇಕೆನ್ನುವ ಉದ್ದೇಶ ನಮ್ಮದಲ್ಲ. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆನ್ನುವುದು ಇದರ ಉದ್ದೇಶ ಎಂದು ಹೇಳಿದರು.