<p><strong>ಬೆಂಗಳೂರು: </strong>ಶಿವಮೊಗ್ಗದ ಸೋಗಾನೆಯ ನೂತನ ವಿಮಾನ ನಿಲ್ದಾಣದ ರನ್ವೇಗೆ ಮಂಗಳವಾರ ಮುತ್ತಿಕ್ಕಿದ ವಾಯುಸೇನೆಯ ಬೋಯಿಂಗ್ 737 ವಿಮಾನ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಕಲರವಕ್ಕೆ ಮುನ್ನುಡಿ ಬರೆದಿದೆ. </p>.<p>ದೆಹಲಿಯಿಂದ ಬೆಳಿಗ್ಗೆ 11.45ಕ್ಕೆ ಹೊರಟ 180 ಪ್ರಯಾಣಿಕರ ಸಾಮರ್ಥ್ಯದ ಈ ಬೃಹತ್ ಏರ್ಬಸ್, ಮಧ್ಯಾಹ್ನ 2.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿಯಿತು. ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ಹುಡ್ಡಾ ಅವರ ನೇತೃತ್ವದಲ್ಲಿ ಬಂದ ಸಿಬ್ಬಂದಿಯನ್ನು ವಿಮಾನ ನಿಲ್ದಾಣದ ಚೀಫ್ ಆಪರೇಟಿಂಗ್ ಆಫೀಸರ್ ಬ್ರಿಗೇಡಿಯರ್ ಡಿ.ಎಂ.ಪೂರ್ವಿಮಠ್ ನೇತೃತ್ವದಲ್ಲಿ ಬರಮಾಡಿಕೊಳ್ಳಲಾಯಿತು.</p>.<p>ಈ ಕುರಿತು ಟ್ವಿಟರ್ನಲ್ಲಿ ಸಂತಸ ವ್ಯಕ್ತಪಡಿಸಿರುವ ಬಿಜೆಪಿ, ‘ಶಿವಮೊಗ್ಗ ಜಿಲ್ಲೆಯ ಜನತೆಯ ಹಲವು ವರ್ಷಗಳ ಕನಸು ನನಸಾಗಿದೆ. ಶಿವಮೊಗ್ಗ ಏರ್ಪೋರ್ಟ್ಗೆ ವಾಯುಸೇನೆಯ ಮೊದಲ ಪ್ರಾಯೋಗಿಕ ವಿಮಾನ ಬಂದಿಳಿಯಿತು. ಇದು ಡಬಲ್ ಎಂಜಿನ್ ಸರ್ಕಾರದಿಂದ ಸಂಪರ್ಕ ಕ್ರಾಂತಿಯಾಗಿದೆ’ ಎಂದು ಬರೆದುಕೊಂಡಿದೆ. </p>.<p>ಮೊದಲು ಇಳಿದ ವಿಮಾನಕ್ಕೆ ಸಂಪ್ರದಾಯದಂತೆ ಎರಡು ಅಗ್ನಿಶಾಮಕ ವಾಹನಗಳ ಮೂಲಕ ನೀರು ಎರಚಿ ವಾಟರ್ ಕೆನನ್ ಗೌರವ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಇದ್ದರು.</p>.<p><strong>ಇದೇ ಮೊದಲು: </strong>‘ಹೊಸ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥವಾಗಿ ಇಳಿಯಲು ಕರ್ನಾಟಕದಲ್ಲಿ ಎಲ್ಲಿಯೂ ವಾಯುಪಡೆಯ ವಿಮಾನ ಬಳಸಿಲ್ಲ. ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಬಳಸಿದ್ದೇವೆ. ಸಾಮಾನ್ಯವಾಗಿ ವಾಣಿಜ್ಯ ವಿಮಾನಗಳನ್ನು ತರಿಸುತ್ತಾರೆ. ಆದರೆ ಅದಕ್ಕೆ ಮೂರು ತಿಂಗಳು ಕಾಯಬೇಕಿತ್ತು’ ಎಂದು ಪೂರ್ವಿಮಠ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನ ಇಳಿಯಲು ಇದು ಸೂಕ್ತವಾಗಿದೆಯೇ ಎಂಬುದನ್ನು ಪರೀಕ್ಷಿಸಲು ಅಷ್ಟೇ ಸಾಮರ್ಥ್ಯದ ಈ ವಿಮಾನವನ್ನು ಇಳಿಸಿ ಪರೀಕ್ಷಿಸಲಾಯಿತು ಎಂದರು. ಮಧ್ಯಾಹ್ನ 3 ಗಂಟೆಗೆ ವಾಪಸ್ ಹೊರಟ ವಿಮಾನ ಸಂಜೆ 5.15ಕ್ಕೆ ದೆಹಲಿಗೆ ತಲುಪಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಿವಮೊಗ್ಗದ ಸೋಗಾನೆಯ ನೂತನ ವಿಮಾನ ನಿಲ್ದಾಣದ ರನ್ವೇಗೆ ಮಂಗಳವಾರ ಮುತ್ತಿಕ್ಕಿದ ವಾಯುಸೇನೆಯ ಬೋಯಿಂಗ್ 737 ವಿಮಾನ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಕಲರವಕ್ಕೆ ಮುನ್ನುಡಿ ಬರೆದಿದೆ. </p>.<p>ದೆಹಲಿಯಿಂದ ಬೆಳಿಗ್ಗೆ 11.45ಕ್ಕೆ ಹೊರಟ 180 ಪ್ರಯಾಣಿಕರ ಸಾಮರ್ಥ್ಯದ ಈ ಬೃಹತ್ ಏರ್ಬಸ್, ಮಧ್ಯಾಹ್ನ 2.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿಯಿತು. ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ಹುಡ್ಡಾ ಅವರ ನೇತೃತ್ವದಲ್ಲಿ ಬಂದ ಸಿಬ್ಬಂದಿಯನ್ನು ವಿಮಾನ ನಿಲ್ದಾಣದ ಚೀಫ್ ಆಪರೇಟಿಂಗ್ ಆಫೀಸರ್ ಬ್ರಿಗೇಡಿಯರ್ ಡಿ.ಎಂ.ಪೂರ್ವಿಮಠ್ ನೇತೃತ್ವದಲ್ಲಿ ಬರಮಾಡಿಕೊಳ್ಳಲಾಯಿತು.</p>.<p>ಈ ಕುರಿತು ಟ್ವಿಟರ್ನಲ್ಲಿ ಸಂತಸ ವ್ಯಕ್ತಪಡಿಸಿರುವ ಬಿಜೆಪಿ, ‘ಶಿವಮೊಗ್ಗ ಜಿಲ್ಲೆಯ ಜನತೆಯ ಹಲವು ವರ್ಷಗಳ ಕನಸು ನನಸಾಗಿದೆ. ಶಿವಮೊಗ್ಗ ಏರ್ಪೋರ್ಟ್ಗೆ ವಾಯುಸೇನೆಯ ಮೊದಲ ಪ್ರಾಯೋಗಿಕ ವಿಮಾನ ಬಂದಿಳಿಯಿತು. ಇದು ಡಬಲ್ ಎಂಜಿನ್ ಸರ್ಕಾರದಿಂದ ಸಂಪರ್ಕ ಕ್ರಾಂತಿಯಾಗಿದೆ’ ಎಂದು ಬರೆದುಕೊಂಡಿದೆ. </p>.<p>ಮೊದಲು ಇಳಿದ ವಿಮಾನಕ್ಕೆ ಸಂಪ್ರದಾಯದಂತೆ ಎರಡು ಅಗ್ನಿಶಾಮಕ ವಾಹನಗಳ ಮೂಲಕ ನೀರು ಎರಚಿ ವಾಟರ್ ಕೆನನ್ ಗೌರವ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಇದ್ದರು.</p>.<p><strong>ಇದೇ ಮೊದಲು: </strong>‘ಹೊಸ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥವಾಗಿ ಇಳಿಯಲು ಕರ್ನಾಟಕದಲ್ಲಿ ಎಲ್ಲಿಯೂ ವಾಯುಪಡೆಯ ವಿಮಾನ ಬಳಸಿಲ್ಲ. ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಬಳಸಿದ್ದೇವೆ. ಸಾಮಾನ್ಯವಾಗಿ ವಾಣಿಜ್ಯ ವಿಮಾನಗಳನ್ನು ತರಿಸುತ್ತಾರೆ. ಆದರೆ ಅದಕ್ಕೆ ಮೂರು ತಿಂಗಳು ಕಾಯಬೇಕಿತ್ತು’ ಎಂದು ಪೂರ್ವಿಮಠ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನ ಇಳಿಯಲು ಇದು ಸೂಕ್ತವಾಗಿದೆಯೇ ಎಂಬುದನ್ನು ಪರೀಕ್ಷಿಸಲು ಅಷ್ಟೇ ಸಾಮರ್ಥ್ಯದ ಈ ವಿಮಾನವನ್ನು ಇಳಿಸಿ ಪರೀಕ್ಷಿಸಲಾಯಿತು ಎಂದರು. ಮಧ್ಯಾಹ್ನ 3 ಗಂಟೆಗೆ ವಾಪಸ್ ಹೊರಟ ವಿಮಾನ ಸಂಜೆ 5.15ಕ್ಕೆ ದೆಹಲಿಗೆ ತಲುಪಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>