<p><strong>ಬೆಂಗಳೂರು: </strong>ಗಾಂಧಿನಗರದಲ್ಲಿರುವ ತ್ರಿವೇಣಿ ಚಿತ್ರಮಂದಿರದಲ್ಲಿ ಭಾನುವಾರ ಬೆಳಿಗ್ಗೆ ಸಿನಿಮಾ ಕಟೌಟ್ ತೆಗೆಯುವ ವೇಳೆ ಕಾಲು ಜಾರಿ ಬಿದ್ದು ಚಂದ್ರಪ್ಪ (68) ಎಂಬುವರು ದುರ್ಮರಣಕ್ಕೀಡಾಗಿದ್ದಾರೆ.</p>.<p>‘ಆರ್.ಟಿ. ನಗರದ ನಿವಾಸಿಯಾಗಿದ್ದ ಚಂದ್ರಪ್ಪ, ಚಿತ್ರಮಂದಿರದಲ್ಲಿ ಹಲವು ವರ್ಷಗಳಿಂದ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸಾವಿಗೆ ಕಾರಣರಾದ ಆರೋಪದಡಿ ಚಿತ್ರಮಂದಿರದ ವ್ಯವಸ್ಥಾಪಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ವಿಚಾರಣೆ ನಡೆಸಬೇಕಿದೆ’ ಎಂದು ಉಪ್ಪಾರಪೇಟೆ ಪೊಲೀಸರು ಹೇಳಿದರು.</p>.<p>‘ಸುಲ್ತಾನ್ಪಾಳ್ಯದ ರಾಜು ಸೆಕ್ಯುರಿಟಿ ಏಜೆನ್ಸಿ ಮೂಲಕ ಚಂದ್ರಪ್ಪ ಕೆಲಸ ಮಾಡುತ್ತಿದ್ದರು. ಅವರಿಗೆ ಭದ್ರತೆ ಜವಾಬ್ದಾರಿ ಮಾತ್ರ ವಹಿಸಲಾಗಿತ್ತು. ಚಿತ್ರಮಂದಿರದ ವ್ಯವಸ್ಥಾಪಕರು, ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಚಂದ್ರಪ್ಪ ಅವರಿಂದ ಕಟೌಟ್ ತೆಗೆಸುತ್ತಿದ್ದರು’ ಎಂದೂ ತಿಳಿಸಿದರು.</p>.<p class="Subhead"><strong>ಕಟೌಟ್ ತೆಗೆಯಲು ₹ 600</strong></p>.<p class="Subhead">‘ತ್ರಿವೇಣಿ ಚಿತ್ರಮಂದಿರದ ಎದುರು ಸಿನಿಮಾ ಕಟೌಟ್ ಇದ್ದು, ಅದಕ್ಕೆ ಪೋಸ್ಟರ್ಗಳನ್ನು ಅಂಟಿಸಲಾಗುತ್ತದೆ. ಸಿನಿಮಾದ ಕಟೌಟ್ ತೆಗೆಯಲು ವ್ಯವಸ್ಥಾಪಕರು ಮುಂದಾಗಿದ್ದರು. ಆದರೆ, ಅದನ್ನು ತೆಗೆಯಲು ಕೆಲಸಗಾರರು ಸಿಕ್ಕಿರಲಿಲ್ಲ. ‘ಕಟೌಟ್ ತೆಗೆದರೆ ₹ 600 ನೀಡುತ್ತೇನೆ’ ಎಂದು ಚಂದ್ರಪ್ಪ ಅವರಿಗೆ ಹೇಳಿದ್ದರು. ಅದಕ್ಕೆ ಅವರು ಸಹ ಒಪ್ಪಿದ್ದರು’ ಎಂದೂ ಪೊಲೀಸರು ಹೇಳಿದರು.</p>.<p>‘ಚಂದ್ರಪ್ಪ ಅವರಿಗೆ ವಯಸ್ಸಾಗಿತ್ತು. ಕಟೌಟ್ ಮೇಲೆ ಹತ್ತಿ ಪೋಸ್ಟರ್ ತೆಗೆಯುತ್ತಿದ್ದ ವೇಳೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು. ಅದರಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದೂ ತಿಳಿಸಿದರು.</p>.<p>‘ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಚಂದ್ರಪ್ಪ ಸಾವಿಗೆ ಕಾರಣವೆಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗಾಂಧಿನಗರದಲ್ಲಿರುವ ತ್ರಿವೇಣಿ ಚಿತ್ರಮಂದಿರದಲ್ಲಿ ಭಾನುವಾರ ಬೆಳಿಗ್ಗೆ ಸಿನಿಮಾ ಕಟೌಟ್ ತೆಗೆಯುವ ವೇಳೆ ಕಾಲು ಜಾರಿ ಬಿದ್ದು ಚಂದ್ರಪ್ಪ (68) ಎಂಬುವರು ದುರ್ಮರಣಕ್ಕೀಡಾಗಿದ್ದಾರೆ.</p>.<p>‘ಆರ್.ಟಿ. ನಗರದ ನಿವಾಸಿಯಾಗಿದ್ದ ಚಂದ್ರಪ್ಪ, ಚಿತ್ರಮಂದಿರದಲ್ಲಿ ಹಲವು ವರ್ಷಗಳಿಂದ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸಾವಿಗೆ ಕಾರಣರಾದ ಆರೋಪದಡಿ ಚಿತ್ರಮಂದಿರದ ವ್ಯವಸ್ಥಾಪಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ವಿಚಾರಣೆ ನಡೆಸಬೇಕಿದೆ’ ಎಂದು ಉಪ್ಪಾರಪೇಟೆ ಪೊಲೀಸರು ಹೇಳಿದರು.</p>.<p>‘ಸುಲ್ತಾನ್ಪಾಳ್ಯದ ರಾಜು ಸೆಕ್ಯುರಿಟಿ ಏಜೆನ್ಸಿ ಮೂಲಕ ಚಂದ್ರಪ್ಪ ಕೆಲಸ ಮಾಡುತ್ತಿದ್ದರು. ಅವರಿಗೆ ಭದ್ರತೆ ಜವಾಬ್ದಾರಿ ಮಾತ್ರ ವಹಿಸಲಾಗಿತ್ತು. ಚಿತ್ರಮಂದಿರದ ವ್ಯವಸ್ಥಾಪಕರು, ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಚಂದ್ರಪ್ಪ ಅವರಿಂದ ಕಟೌಟ್ ತೆಗೆಸುತ್ತಿದ್ದರು’ ಎಂದೂ ತಿಳಿಸಿದರು.</p>.<p class="Subhead"><strong>ಕಟೌಟ್ ತೆಗೆಯಲು ₹ 600</strong></p>.<p class="Subhead">‘ತ್ರಿವೇಣಿ ಚಿತ್ರಮಂದಿರದ ಎದುರು ಸಿನಿಮಾ ಕಟೌಟ್ ಇದ್ದು, ಅದಕ್ಕೆ ಪೋಸ್ಟರ್ಗಳನ್ನು ಅಂಟಿಸಲಾಗುತ್ತದೆ. ಸಿನಿಮಾದ ಕಟೌಟ್ ತೆಗೆಯಲು ವ್ಯವಸ್ಥಾಪಕರು ಮುಂದಾಗಿದ್ದರು. ಆದರೆ, ಅದನ್ನು ತೆಗೆಯಲು ಕೆಲಸಗಾರರು ಸಿಕ್ಕಿರಲಿಲ್ಲ. ‘ಕಟೌಟ್ ತೆಗೆದರೆ ₹ 600 ನೀಡುತ್ತೇನೆ’ ಎಂದು ಚಂದ್ರಪ್ಪ ಅವರಿಗೆ ಹೇಳಿದ್ದರು. ಅದಕ್ಕೆ ಅವರು ಸಹ ಒಪ್ಪಿದ್ದರು’ ಎಂದೂ ಪೊಲೀಸರು ಹೇಳಿದರು.</p>.<p>‘ಚಂದ್ರಪ್ಪ ಅವರಿಗೆ ವಯಸ್ಸಾಗಿತ್ತು. ಕಟೌಟ್ ಮೇಲೆ ಹತ್ತಿ ಪೋಸ್ಟರ್ ತೆಗೆಯುತ್ತಿದ್ದ ವೇಳೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು. ಅದರಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದೂ ತಿಳಿಸಿದರು.</p>.<p>‘ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಚಂದ್ರಪ್ಪ ಸಾವಿಗೆ ಕಾರಣವೆಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>