ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಗ್‌ ಮುಳುಗಡೆ: ವಿಚಾರಣೆಗೆ ಆದೇಶ

Last Updated 18 ಮೇ 2021, 18:38 IST
ಅಕ್ಷರ ಗಾತ್ರ

ಬೆಂಗಳೂರು: ‘ತೌತೆ’ ಚಂಡಮಾರುತದ ಅಬ್ಬರದ ವೇಳೆಯಲ್ಲಿ ಮಂಗಳೂರು ಪೆಟ್ರೋಕೆಮಿಕಲ್ಸ್ ಅಂಡ್‌ ರಿಫೈನರಿ ಲಿಮಿಟೆಡ್‌ಗೆ (ಎಂಆರ್‌ಪಿಎಲ್‌) ಸೇರಿದ ಎರಡು ಟಗ್‌ಗಳು ದುರಂತಕ್ಕೀಡಾದ ಘಟನೆ ಕುರಿತು ವಿಚಾರಣೆ ನಡೆಸಲು ನಿರ್ಧರಿಸಿರುವ ಕಂದಾಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿದೆ.

ಎರಡು ಟಗ್‌ಗಳು ಶುಕ್ರವಾರ ಮಧ್ಯಾಹ್ನ ಎನ್‌ಎಂಪಿಟಿ ಬಂದರಿನಿಂದ ಲಂಗರು ಕಡಿದುಕೊಂಡು ಸಮುದ್ರ ಪಾಲಾಗಿದ್ದವು. ‘ಅಲಯನ್ಸ್‌’ ಹೆಸರಿನ ಟಗ್‌ ನೀರಿನಲ್ಲಿ ಮಗುಚಿ ಬಿದ್ದಿತ್ತು. ಅದರಲ್ಲಿದ್ದ ಎಂಟು ಮಂದಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಕೋರಮಂಡಲ್‌ ಸಪೋರ್ಟರ್‌–9 ಹೆಸರಿನ ಟಗ್‌ ಮೂಲ್ಕಿ ಬಳಿ ಬಂಡೆಗಳ ನಡುವೆ ಸಿಲುಕಿತ್ತು. ಅದರಲ್ಲಿದ್ದ ಒಂಬತ್ತು ಕಾರ್ಮಿಕರನ್ನು ನೌಕಾಪಡೆಯ ಹೆಲಿಕಾಪ್ಟರ್‌ ನೆರವಿನಲ್ಲಿ ಭಾನುವಾರ ರಕ್ಷಿಸಲಾಗಿದೆ.

ಚಂಡಮಾರುತದಿಂದ ಗಾಳಿ, ಮಳೆ ಹಾಗೂ ಸಮುದ್ರ ಪ್ರಕ್ಷುಬ್ಧಗೊಳ್ಳುವ ಕುರಿತು ಮೇ 13ರಂದೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ತಕ್ಷಣವೇ ಎಲ್ಲ ದೋಣಿಗಳು, ಹಡಗು ಮತ್ತು ಸಣ್ಣ ನೌಕೆಗಳನ್ನು ಸಮುದ್ರಕ್ಕೆ ಇಳಿಸದಂತೆ ಭಾರತೀಯ ಕೋಸ್ಟ್‌ ಗಾರ್ಡ್‌ ಎಚ್ಚರಿಕೆ ನೀಡಿತ್ತು. ಅವೆಲ್ಲವನ್ನೂ ಮೀರಿ ಎರಡು ಟಗ್‌ಗಳು ಹೇಗೆ ಸಮುದ್ರದಲ್ಲಿ ಸಿಲುಕಿದವು? ದುರಂತಕ್ಕೆ ಕಾರಣಗಳೇನು ಎಂಬುದರ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ವಿಪ‍ತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT