ಬೆಂಗಳೂರು: ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಸಂತ್ರಸ್ತರಾದ ಜನರ ನೆರವಿಗೆ ಭಾರತ ನಿಲ್ಲಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಲ್ಲಿನ ಮಾದಾವರದ ಬಳಿಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಸೋಮವಾರ ಆರಂಭವಾದ ಭಾರತ ಇಂಧನ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಮೃತರಿಗೆ ಸಂತಾಪ ಸೂಚಿಸಿದರು.
ಟರ್ಕಿಯಲ್ಲಿ ಭೀಕರ ಭೂಕಂಪದಿಂದ ಹಲವರು ಮೃತಪಟ್ಟಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಸಂತ್ರಸ್ತರ ಪರವಾಗಿ ಭಾರತದ 140 ಕೋಟಿ ಜನರು ಇದ್ದಾರೆ. ಅವರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸಲು ಸಿದ್ಧ ಎಂದರು.