ಕೋವಿಡ್ ದೃಢಪಟ್ಟಿರುವ ಅಧಿಕಾರಿಗಳು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಈ ಕಾರಣಕ್ಕೆ ‘ಕೃಷ್ಣಾ’ದಲ್ಲಿ ಮಂಗಳವಾರ ಮತ್ತು ಬುಧವಾರ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯವರು ರದ್ದುಪಡಿಸಿ, ರೇಸ್ಕೋರ್ಸ್ನ ಅಧಿಕೃತ ನಿವಾಸದಲ್ಲಿ ಸಭೆಗಳನ್ನು ನಡೆಸಿದರು. ‘ಕೃಷ್ಣಾ’ ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದೆ. ಇಲ್ಲಿ ಪೊಲೀಸರು ಸೇರಿ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.