ಆಗಸ್ಟ್ 28ರಂದು ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಯ ನೇತೃತ್ವದಲ್ಲಿ ನಡೆದಿದದದ ಕಾರ್ಯಾಚರಣೆಯಲ್ಲಿ ಜಿಲ್ಲೆಯ ಅಯ್ಯಂಗೇರಿ ಗ್ರಾಮದ ಮಜೀದ್ (35), ಅದೇ ಗ್ರಾಮದ ಶಿಯಾಬುದ್ದೀನ್ (32) ಹಾಗೂ ಬೆಂಗಳೂರು ಶಿವಾಜಿನಗರದ ಮುಜಾಮಿಲ್ (31) ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಅಂದು ಮತ್ತೊಂದು ಕಾರಿನಲ್ಲಿದ್ದ ಐವರು ಆರೋಪಿಗಳು ತಪ್ಪಿಸಿಕೊಂಡಿದ್ದರು. ಅದರಲ್ಲಿ ಈಗ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಸಂಖ್ಯೆ 5ಕ್ಕೇರಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ತಿಂಗಳು ನಡೆದಿದ್ದ ಕಾರ್ಯಾಚರಣೆಯಲ್ಲಿ ಬಂಧಿತರಿಂದ 300 ಗ್ರಾಂನಷ್ಟು ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆಯಲಾಗಿತ್ತು.