<p><strong>ಬಾಗಲಕೋಟೆ: </strong>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕಲ್ಲು ಕ್ವಾರಿಗಳು ಹಾಗೂ ಗಣಿ ಮಾಲೀಕರೊಂದಿಗೆ ಮಂಗಳವಾರ ಸಭೆನಡೆಸಿದಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ, ಅಲ್ಲಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದರು.</p>.<p>ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಕಲ್ಲು ಕ್ವಾರಿಗಳ ಮಾಲೀಕರಿಗೆ ಕಿರುಕುಳ ನೀಡಿದ ಹಾಗೂ ವ್ಯಾಪಕ ಭ್ರಷ್ಟಾಚಾರದ ಆರೋಪದ ಮೇಲೆ ಬಾಗಲಕೋಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯ ಭೂ ವಿಜ್ಞಾನಿ ಫಯಾಜ್ ಅಹಮದ್ ಶೇಖ್ ಹಾಗೂ ಈ ಹಿಂದೆ ಇಲ್ಲಿ ಕೆಲಸ ಮಾಡಿ ಸದ್ಯ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿರುವ ಹಿರಿಯ ಭೂ ವಿಜ್ಞಾನಿ ಬಿ.ಎಂ.ಲಿಂಗರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.</p>.<p>ಸಚಿವರು ಕರೆದಿದ್ದ ಸಭೆಗೆ ಮಾಧ್ಯಮದವರಿಗೆ ಪ್ರವೇಶವಿರಲಿಲ್ಲ. ಸಭೆಯಲ್ಲಿ ಪಾಲ್ಗೊಂಡಿದ್ದ ಫಯಾಜ್ ಅಹಮದ್ ಅರ್ಧದಲ್ಲಿಯೇ ಹೊರ ನಡೆದಿದ್ದರು. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೆ ಮಾಡಿದರೆ ಅವರು ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕಲ್ಲು ಕ್ವಾರಿಗಳು ಹಾಗೂ ಗಣಿ ಮಾಲೀಕರೊಂದಿಗೆ ಮಂಗಳವಾರ ಸಭೆನಡೆಸಿದಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ, ಅಲ್ಲಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದರು.</p>.<p>ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಕಲ್ಲು ಕ್ವಾರಿಗಳ ಮಾಲೀಕರಿಗೆ ಕಿರುಕುಳ ನೀಡಿದ ಹಾಗೂ ವ್ಯಾಪಕ ಭ್ರಷ್ಟಾಚಾರದ ಆರೋಪದ ಮೇಲೆ ಬಾಗಲಕೋಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯ ಭೂ ವಿಜ್ಞಾನಿ ಫಯಾಜ್ ಅಹಮದ್ ಶೇಖ್ ಹಾಗೂ ಈ ಹಿಂದೆ ಇಲ್ಲಿ ಕೆಲಸ ಮಾಡಿ ಸದ್ಯ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿರುವ ಹಿರಿಯ ಭೂ ವಿಜ್ಞಾನಿ ಬಿ.ಎಂ.ಲಿಂಗರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.</p>.<p>ಸಚಿವರು ಕರೆದಿದ್ದ ಸಭೆಗೆ ಮಾಧ್ಯಮದವರಿಗೆ ಪ್ರವೇಶವಿರಲಿಲ್ಲ. ಸಭೆಯಲ್ಲಿ ಪಾಲ್ಗೊಂಡಿದ್ದ ಫಯಾಜ್ ಅಹಮದ್ ಅರ್ಧದಲ್ಲಿಯೇ ಹೊರ ನಡೆದಿದ್ದರು. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೆ ಮಾಡಿದರೆ ಅವರು ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>