ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಿ ಮಾಲೀಕರ ದೂರು ಆಧರಿಸಿ ಇಬ್ಬರು ಅಧಿಕಾರಿಗಳು ಸಸ್ಪೆಂಡ್: ನಿರಾಣಿ ಆದೇಶ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ಆದೇಶ
Last Updated 16 ಫೆಬ್ರುವರಿ 2021, 13:35 IST
ಅಕ್ಷರ ಗಾತ್ರ

ಬಾಗಲಕೋಟೆ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕಲ್ಲು ಕ್ವಾರಿಗಳು ಹಾಗೂ ಗಣಿ ಮಾಲೀಕರೊಂದಿಗೆ ಮಂಗಳವಾರ ಸಭೆನಡೆಸಿದಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ, ಅಲ್ಲಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದರು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಕಲ್ಲು ಕ್ವಾರಿಗಳ ಮಾಲೀಕರಿಗೆ ಕಿರುಕುಳ ನೀಡಿದ ಹಾಗೂ ವ್ಯಾಪಕ ಭ್ರಷ್ಟಾಚಾರದ ಆರೋಪದ ಮೇಲೆ ಬಾಗಲಕೋಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯ ಭೂ ವಿಜ್ಞಾನಿ ಫಯಾಜ್‌ ಅಹಮದ್ ಶೇಖ್ ಹಾಗೂ ಈ ಹಿಂದೆ ಇಲ್ಲಿ ಕೆಲಸ ಮಾಡಿ ಸದ್ಯ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿರುವ ಹಿರಿಯ ಭೂ ವಿಜ್ಞಾನಿ ಬಿ.ಎಂ.ಲಿಂಗರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಸಚಿವರು ಕರೆದಿದ್ದ ಸಭೆಗೆ ಮಾಧ್ಯಮದವರಿಗೆ ಪ್ರವೇಶವಿರಲಿಲ್ಲ. ಸಭೆಯಲ್ಲಿ ಪಾಲ್ಗೊಂಡಿದ್ದ ಫಯಾಜ್ ಅಹಮದ್ ಅರ್ಧದಲ್ಲಿಯೇ ಹೊರ ನಡೆದಿದ್ದರು. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೆ ಮಾಡಿದರೆ ಅವರು ಸ್ವೀಕರಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT