ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಕಲ್ಲು ಕ್ವಾರಿಗಳ ಮಾಲೀಕರಿಗೆ ಕಿರುಕುಳ ನೀಡಿದ ಹಾಗೂ ವ್ಯಾಪಕ ಭ್ರಷ್ಟಾಚಾರದ ಆರೋಪದ ಮೇಲೆ ಬಾಗಲಕೋಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯ ಭೂ ವಿಜ್ಞಾನಿ ಫಯಾಜ್ ಅಹಮದ್ ಶೇಖ್ ಹಾಗೂ ಈ ಹಿಂದೆ ಇಲ್ಲಿ ಕೆಲಸ ಮಾಡಿ ಸದ್ಯ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿರುವ ಹಿರಿಯ ಭೂ ವಿಜ್ಞಾನಿ ಬಿ.ಎಂ.ಲಿಂಗರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.