ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ, ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಾಥಮಿಕ ಮಾಹಿತಿ ಪ್ರಕಾರ ಘಟನೆಗೂ ಮೂರ್ನಾಲ್ಕು ದಿನಗಳ ಹಿಂದೆ ಗ್ರಾಮದ ದೇವಸ್ಥಾನದ ಬಳಿ ಅನಿಲ ಇಂಗಳಗಿ ಕುಳಿತಿದ್ದಾಗ ಆರೋಪಿಗಳು ಆಕ್ಷೇಪ ವ್ಯಕ್ತಪಡಿಸಿ, ಗಲಾಟೆ ಮಾಡಿದ್ದರು. ಬಳಿಕ ಇದೇ ವೈಷಮ್ಯದ ಹಿನ್ನೆಲೆಯಲ್ಲಿ ಆರೋಪಿಗಳು ಯುವಕನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ’ ಎಂದರು.