ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಮೈಸೂರು, ಕಲಬುರಗಿ ವಿಮಾನ ನಿಲ್ದಾಣಗಳು ಕಾರ್ಯಾಚರಣೆ ಮಾಡುತ್ತಿದ್ದು, ರಾಯಚೂರು, ಬೀದರ್, ಶಿವಮೊಗ್ಗ ವಿಮಾನ ನಿಲ್ದಾಣಗಳು ಸದ್ಯದಲ್ಲೇ ಕಾರ್ಯಾರಂಭ ಮಾಡಲಿವೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವರ ಜೊತೆ ವಿವಿಧ ರಾಜ್ಯಗಳ ಮೂಲಸೌಕರ್ಯ ಅಭಿವೃದ್ಧಿ ಸಚಿವರ ಸಭೆ ದೆಹಲಿಯಲ್ಲಿ ಮುಂದಿನ ವಾರ ನಡೆಯಲಿದೆ. ವಿಮಾನ ನಿಲ್ದಾಣಗಳ ಉಸ್ತುವಾರಿಯನ್ನು ರಾಜ್ಯಕ್ಕೆ ವಹಿಸಿಕೊಡುವಂತೆ ಈ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು’ ಎಂದರು.