‘ಹಿಂದೆ ಇದ್ದ ರೀತಿಯಲ್ಲೇ ಹೊಸ ನಗರಗಳನ್ನೂ ನಿರ್ಮಾಣ ಮಾಡಬೇಕೆಂಬ ಧೋರಣೆ ಸಮರ್ಪಕ ಎನಿಸುವುದಿಲ್ಲ. ಸಾರ್ವಜನಿಕರ ಮೂಲಭೂತ ಅಗತ್ಯಗಳನ್ನು ಪೂರೈಸಲು ವಿಶ್ವವಿದ್ಯಾಲಯ, ಕಾಲೇಜು, ದವಾಖಾನೆ ಇತ್ಯಾದಿಗಳ ದೊಡ್ಡ ಪಟ್ಟಿಯೇ ಇರುತ್ತದೆ. ಅವುಗಳನ್ನೆಲ್ಲಾ ಜನರಿಗೆ ಮರು ಕಲ್ಪಿಸಿಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ. ಆದ್ದರಿಂದ, ಈ ಪ್ರಕರಣದಲ್ಲಿ ಮುಚಖಂಡಿ ಮತ್ತು ಬಾಗಲಕೋಟೆ ಗ್ರಾಮ ವ್ಯಾಪ್ತಿಯ 1,643 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡ ಸರ್ಕಾರದ ಕ್ರಮ ನ್ಯಾಯೋಚಿತವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.