ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಸಿನ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರಿಸಿದ ಕಾರಜೋಳ, ‘ಯುಕೆಪಿ ಮೂರನೇ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ನ್ಯಾಯಮಂಡಳಿಯಿಂದ ತೀರ್ಪು ಬಂದ ಬಳಿಕ ಯೋಜನೆ ಕೈಗೆತ್ತಿಕೊಳ್ಳಲು 2012-13ರಲ್ಲಿ ₹ 17,207 ಕೋಟಿ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ನಂತರ ಸರ್ಕಾರ ಬದಲಾಯಿತು. ಆರಂಭದಲ್ಲಿ ₹ 735 ಕೋಟಿಯನ್ನು ಬಿಜೆಪಿ ಸರ್ಕಾರ ವೆಚ್ಚ ಮಾಡಿತ್ತು. ಸಿದ್ದರಾಮಯ್ಯ ಸರ್ಕಾರ ₹ 7,600 ಕೋಟಿ, ಕುಮಾರಸ್ವಾಮಿ ಸರ್ಕಾರ ₹ 1,346 ಕೋಟಿ ಖರ್ಚು ಮಾಡಿತ್ತು’ ಎಂದು ವಿವರಿಸಿದರು.