<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ತಾಲ್ಲೂಕಿನ ವಿರುಪಾಪುರ ಗಡ್ಡೆಯ ಸುತ್ತಮುತ್ತಲಿನ ಕಂದಾಯ ಭೂಮಿಗಳಲ್ಲಿ ಪರವಾನಗಿ ಪಡೆಯದೇ 16 ರೆಸಾರ್ಟ್ಗಳನ್ನು ನಿರ್ಮಿಸಲಾಗಿದೆ.</p>.<p>ಹಿಂದೆ ನಿರ್ಮಾಣಗೊಂಡಿದ್ದ ಎಲ್ಲ ರೆಸಾರ್ಟ್ಗಳನ್ನು ತೆರವುಗೊಳಿಸಲಾಗಿತ್ತು. ಆದರೂ ಕೆಲವರು ರಾಜಕೀಯ ಪ್ರಭಾವ ಬಳಸಿ ಸಾಣಾಪುರ, ಸೇತುವೆ, ಹನುಮನಹಳ್ಳಿ, ಚಿಕ್ಕರಾಂಪುರ, ಅಂಜನಳ್ಳಿ, ರಂಗಾಪುರ ಗ್ರಾಮದಲ್ಲಿ ಮತ್ತೆ ರೆಸಾರ್ಟ್ ನಿರ್ಮಿಸಿದ್ದಾರೆ.</p>.<p>‘ಆನೆಗುಂದಿ ಭಾಗದ ಸುತ್ತಮುತ್ತಲಿನ ಎಲ್ಲ ಗ್ರಾಮಗಳು ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತವೆ. ಪ್ರಾಧಿಕಾರದ ಪರವಾನಗಿ ಇಲ್ಲದೇ ಕಟ್ಟಡ ನಿರ್ಮಾಣ, ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ನಿಯಮ ಇದೆ. ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ರೆಸಾರ್ಟ್ ನಿರ್ಮಾಣಕ್ಕೆ ಕೃಷಿಕರು ಭೂಮಿಯನ್ನು ಗುತ್ತಿಗೆ ರೂಪದಲ್ಲಿ ನೀಡಿದ್ದಾರೆ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p class="Subhead">‘ಹಿಂದೆ ಕೆಲ ಕೃಷಿಕರು ಭೂಮಿಯನ್ನು ವಾರ್ಷಿಕ ₹50 ರಿಂದ ₹60 ಸಾವಿರಕ್ಕೆ ಗುತ್ತಿಗೆ ನೀಡುತ್ತಿದ್ದರು. ಈಗ ₹3 ಲಕ್ಷದವರೆಗೆ ಗುತ್ತಿಗೆ ನೀಡಿದ್ದು, 5 ರಿಂದ 10 ವರ್ಷಗಳವರೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ’ ಎಂದೂ ಗ್ರಾಮಸ್ಥರು ತಿಳಿಸಿದ್ದಾರೆ.</p>.<p class="Subhead">ಪರವಾನಗಿಯೇ ಇಲ್ಲ: ಉಳುಮೆ ಮಾಡುವ ಭೂಮಿಯಲ್ಲಿ ವ್ಯಾಪಾರ-ವಹಿವಾಟು ನಡೆಸಲು, ಪರವಾನಗಿ ಪಡೆಯಬೇಕು. ಜೊತೆಗೆ ಉಳುಮೆಗೆ ಈ ಭೂಮಿ ಸೂಕ್ತವಲ್ಲ ಎಂದು (ಎನ್ಎ) ಸರ್ಟಿಫಿಕೇಟ್ ಪಡೆದಿರಬೇಕು. ಈ ಭಾಗದಲ್ಲಿ ನಿರ್ಮಾಣವಾದ ರೆಸಾರ್ಟ್ಗಳಿಗೆ ಪರವಾನಗಿಯೇ ಇಲ್ಲ ಎನ್ನಲಾಗಿದೆ.</p>.<p class="Subhead">ಅಧಿಕಾರಿಗಳ ಸಾಥ್: ’ರೆಸಾರ್ಟ್ ನಿರ್ಮಾಣದ ನಂತರ ವಿದ್ಯುತ್ ಸೌಲಭ್ಯಕ್ಕೆ ಸಂಬಂಧಪಟ್ಟ ಪಿಡಿಒಗಳಿಂದ ಎನ್ಒಸಿ ಸಹ ಪಡೆಯಲಾಗಿದೆ. ಈ ಪತ್ರದ ಆಧಾರದಲ್ಲಿ ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ನೀಡುತ್ತಿದ್ದಾರೆ’ ಎಂಬ ಆರೋಪಗಳಿವೆ.</p>.<p class="Subhead">*<br />ಸಾಣಪುರ ಭಾಗದ ಸುತ್ತಮುತ್ತ ಪರವಾನಗಿ ಪಡೆಯದ ರೆಸಾರ್ಟ್ಗಳಿಗೆ ತಾಲ್ಲೂಕು ಆಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನೋಟಿಸ್ ನೀಡಲಾಗಿದೆ.<br /><em><strong>-ಯು.ನಾಗರಾಜ, ತಹಶೀಲ್ದಾರ್ ಗಂಗಾವತಿ</strong></em></p>.<p class="Subhead">*<br />ಅನಧಿಕೃತ ರೆಸಾರ್ಟ್ಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಕೆಲ ಕಂದಾಯ ಭೂಮಿ ವಾರಸುದಾರರು ಪಹಣಿಗಳನ್ನು ನೀಡಿದ್ದು, ಜಂಟಿ ಸಮೀಕ್ಷೆ ನಡೆಸಲಾಗುವುದು.<br /><em><strong>-ಶಿವರಾಜ ಮೇಟಿ, ಅರಣ್ಯ ಸಂರಕ್ಷಣಾ ಅಧಿಕಾರಿ, ಗಂಗಾವತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ತಾಲ್ಲೂಕಿನ ವಿರುಪಾಪುರ ಗಡ್ಡೆಯ ಸುತ್ತಮುತ್ತಲಿನ ಕಂದಾಯ ಭೂಮಿಗಳಲ್ಲಿ ಪರವಾನಗಿ ಪಡೆಯದೇ 16 ರೆಸಾರ್ಟ್ಗಳನ್ನು ನಿರ್ಮಿಸಲಾಗಿದೆ.</p>.<p>ಹಿಂದೆ ನಿರ್ಮಾಣಗೊಂಡಿದ್ದ ಎಲ್ಲ ರೆಸಾರ್ಟ್ಗಳನ್ನು ತೆರವುಗೊಳಿಸಲಾಗಿತ್ತು. ಆದರೂ ಕೆಲವರು ರಾಜಕೀಯ ಪ್ರಭಾವ ಬಳಸಿ ಸಾಣಾಪುರ, ಸೇತುವೆ, ಹನುಮನಹಳ್ಳಿ, ಚಿಕ್ಕರಾಂಪುರ, ಅಂಜನಳ್ಳಿ, ರಂಗಾಪುರ ಗ್ರಾಮದಲ್ಲಿ ಮತ್ತೆ ರೆಸಾರ್ಟ್ ನಿರ್ಮಿಸಿದ್ದಾರೆ.</p>.<p>‘ಆನೆಗುಂದಿ ಭಾಗದ ಸುತ್ತಮುತ್ತಲಿನ ಎಲ್ಲ ಗ್ರಾಮಗಳು ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತವೆ. ಪ್ರಾಧಿಕಾರದ ಪರವಾನಗಿ ಇಲ್ಲದೇ ಕಟ್ಟಡ ನಿರ್ಮಾಣ, ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ನಿಯಮ ಇದೆ. ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ರೆಸಾರ್ಟ್ ನಿರ್ಮಾಣಕ್ಕೆ ಕೃಷಿಕರು ಭೂಮಿಯನ್ನು ಗುತ್ತಿಗೆ ರೂಪದಲ್ಲಿ ನೀಡಿದ್ದಾರೆ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p class="Subhead">‘ಹಿಂದೆ ಕೆಲ ಕೃಷಿಕರು ಭೂಮಿಯನ್ನು ವಾರ್ಷಿಕ ₹50 ರಿಂದ ₹60 ಸಾವಿರಕ್ಕೆ ಗುತ್ತಿಗೆ ನೀಡುತ್ತಿದ್ದರು. ಈಗ ₹3 ಲಕ್ಷದವರೆಗೆ ಗುತ್ತಿಗೆ ನೀಡಿದ್ದು, 5 ರಿಂದ 10 ವರ್ಷಗಳವರೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ’ ಎಂದೂ ಗ್ರಾಮಸ್ಥರು ತಿಳಿಸಿದ್ದಾರೆ.</p>.<p class="Subhead">ಪರವಾನಗಿಯೇ ಇಲ್ಲ: ಉಳುಮೆ ಮಾಡುವ ಭೂಮಿಯಲ್ಲಿ ವ್ಯಾಪಾರ-ವಹಿವಾಟು ನಡೆಸಲು, ಪರವಾನಗಿ ಪಡೆಯಬೇಕು. ಜೊತೆಗೆ ಉಳುಮೆಗೆ ಈ ಭೂಮಿ ಸೂಕ್ತವಲ್ಲ ಎಂದು (ಎನ್ಎ) ಸರ್ಟಿಫಿಕೇಟ್ ಪಡೆದಿರಬೇಕು. ಈ ಭಾಗದಲ್ಲಿ ನಿರ್ಮಾಣವಾದ ರೆಸಾರ್ಟ್ಗಳಿಗೆ ಪರವಾನಗಿಯೇ ಇಲ್ಲ ಎನ್ನಲಾಗಿದೆ.</p>.<p class="Subhead">ಅಧಿಕಾರಿಗಳ ಸಾಥ್: ’ರೆಸಾರ್ಟ್ ನಿರ್ಮಾಣದ ನಂತರ ವಿದ್ಯುತ್ ಸೌಲಭ್ಯಕ್ಕೆ ಸಂಬಂಧಪಟ್ಟ ಪಿಡಿಒಗಳಿಂದ ಎನ್ಒಸಿ ಸಹ ಪಡೆಯಲಾಗಿದೆ. ಈ ಪತ್ರದ ಆಧಾರದಲ್ಲಿ ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ನೀಡುತ್ತಿದ್ದಾರೆ’ ಎಂಬ ಆರೋಪಗಳಿವೆ.</p>.<p class="Subhead">*<br />ಸಾಣಪುರ ಭಾಗದ ಸುತ್ತಮುತ್ತ ಪರವಾನಗಿ ಪಡೆಯದ ರೆಸಾರ್ಟ್ಗಳಿಗೆ ತಾಲ್ಲೂಕು ಆಡಳಿತ ಮತ್ತು ಅರಣ್ಯ ಇಲಾಖೆ ವತಿಯಿಂದ ನೋಟಿಸ್ ನೀಡಲಾಗಿದೆ.<br /><em><strong>-ಯು.ನಾಗರಾಜ, ತಹಶೀಲ್ದಾರ್ ಗಂಗಾವತಿ</strong></em></p>.<p class="Subhead">*<br />ಅನಧಿಕೃತ ರೆಸಾರ್ಟ್ಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಕೆಲ ಕಂದಾಯ ಭೂಮಿ ವಾರಸುದಾರರು ಪಹಣಿಗಳನ್ನು ನೀಡಿದ್ದು, ಜಂಟಿ ಸಮೀಕ್ಷೆ ನಡೆಸಲಾಗುವುದು.<br /><em><strong>-ಶಿವರಾಜ ಮೇಟಿ, ಅರಣ್ಯ ಸಂರಕ್ಷಣಾ ಅಧಿಕಾರಿ, ಗಂಗಾವತಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>