<p><strong>ಬೆಂಗಳೂರು:</strong> ಸಂಪುಟ ವಿಸ್ತರಣೆ ನಂತರ ಖಾತೆ ವಿಚಾರವಾಗಿ ಎದ್ದಿದ್ದ ಅಸಮಾಧಾನಗಳಿಗೆ ಅಂತ್ಯಹಾಡುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೆಲ ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ.</p>.<p>ಅಬಕಾರಿ ಖಾತೆ ಕೊಟ್ಟಿದ್ದರಿಂದ ಮುನಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಅವರಿಗೆ ಸ್ಥಳಿಯಾಡಳಿತ ಮತ್ತು ಸಕ್ಕರೆ ಖಾತೆ ನೀಡಲಾಗಿದೆ. ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ.</p>.<p>ವೈದ್ಯಕೀಯ ಶಿಕ್ಷಣ ಖಾತೆ ಪಡೆದು ಬೇಸರಗೊಂಡಿದ್ದ ಜೆ.ಸಿ ಮಾಧುಸ್ವಾಮಿ ಅವರಿಗೆ ಹೆಚ್ಚುವರಿ ಖಾತೆ ಸಿಕ್ಕಿದೆ. ಹಜ್ ಮತ್ತು ವಕ್ಫ್ ನೀಡಲಾಗಿದೆ. ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.</p>.<p>ತೋಟಗಾರಿಕೆ ಮತ್ತು ರೇಷ್ಮೆ ಖಾತೆಯನ್ನು ಆರ್ ಶಂಕರ್ಗೆ ನೀಡಲಾಗಿದೆ. ನಿನ್ನೆ ತೋಟಗಾರಿಕೆ ಮತ್ತು ಸಕ್ಕರೆ ಖಾತೆಯನ್ನು ಗೋಪಾಲಯ್ಯ ಅವರಿಗೆ ನೀಡಲಾಗಿತ್ತು.</p>.<p>ಯುವಜನಸೇವೆ ಮತ್ತು ಕ್ರೀಡೆ ಖಾತೆ ಸಚಿವರಾಗಿದ್ದ ಕೆ.ಸಿ ನಾರಾಯಣ ಗೌಡ ಅವರಿಗೆ ಮುಖ್ಯಮಂತ್ರಿ ಅವರ ಬಳಿ ಇದ್ದ ಯೋಜನೆ, ಸಾಂಖ್ಯಿಕ ಅಂಕಿ ಅಂಶಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.</p>.<p>ಎಂ.ಟಿ.ಬಿ ನಾಗರಾಜು, ಗೋಪಾಲಯ್ಯ, ನಾರಾಯಣಗೌಡ, ಮಾಧುಸ್ವಾಮಿ ಅವರು ಗುರುವಾರ ತಮ್ಮ ಖಾತೆಗಳ ವಿಚಾರವಾಗಿ ಅಸಮಾಧಾನ ಹೊರ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಪುಟ ವಿಸ್ತರಣೆ ನಂತರ ಖಾತೆ ವಿಚಾರವಾಗಿ ಎದ್ದಿದ್ದ ಅಸಮಾಧಾನಗಳಿಗೆ ಅಂತ್ಯಹಾಡುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೆಲ ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ.</p>.<p>ಅಬಕಾರಿ ಖಾತೆ ಕೊಟ್ಟಿದ್ದರಿಂದ ಮುನಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಅವರಿಗೆ ಸ್ಥಳಿಯಾಡಳಿತ ಮತ್ತು ಸಕ್ಕರೆ ಖಾತೆ ನೀಡಲಾಗಿದೆ. ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ.</p>.<p>ವೈದ್ಯಕೀಯ ಶಿಕ್ಷಣ ಖಾತೆ ಪಡೆದು ಬೇಸರಗೊಂಡಿದ್ದ ಜೆ.ಸಿ ಮಾಧುಸ್ವಾಮಿ ಅವರಿಗೆ ಹೆಚ್ಚುವರಿ ಖಾತೆ ಸಿಕ್ಕಿದೆ. ಹಜ್ ಮತ್ತು ವಕ್ಫ್ ನೀಡಲಾಗಿದೆ. ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.</p>.<p>ತೋಟಗಾರಿಕೆ ಮತ್ತು ರೇಷ್ಮೆ ಖಾತೆಯನ್ನು ಆರ್ ಶಂಕರ್ಗೆ ನೀಡಲಾಗಿದೆ. ನಿನ್ನೆ ತೋಟಗಾರಿಕೆ ಮತ್ತು ಸಕ್ಕರೆ ಖಾತೆಯನ್ನು ಗೋಪಾಲಯ್ಯ ಅವರಿಗೆ ನೀಡಲಾಗಿತ್ತು.</p>.<p>ಯುವಜನಸೇವೆ ಮತ್ತು ಕ್ರೀಡೆ ಖಾತೆ ಸಚಿವರಾಗಿದ್ದ ಕೆ.ಸಿ ನಾರಾಯಣ ಗೌಡ ಅವರಿಗೆ ಮುಖ್ಯಮಂತ್ರಿ ಅವರ ಬಳಿ ಇದ್ದ ಯೋಜನೆ, ಸಾಂಖ್ಯಿಕ ಅಂಕಿ ಅಂಶಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.</p>.<p>ಎಂ.ಟಿ.ಬಿ ನಾಗರಾಜು, ಗೋಪಾಲಯ್ಯ, ನಾರಾಯಣಗೌಡ, ಮಾಧುಸ್ವಾಮಿ ಅವರು ಗುರುವಾರ ತಮ್ಮ ಖಾತೆಗಳ ವಿಚಾರವಾಗಿ ಅಸಮಾಧಾನ ಹೊರ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>