ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ‘₹5 ಸಾವಿರ ಮೊತ್ತದಲ್ಲಿ ಒಂದು ಮನೆ ಕಟ್ಟಿಕೊಡುವ ವಸತಿ ಯೋಜನೆ ಇದ್ದಾಗಿನ ಕಾಲದಿಂದಲೂ ವಿವಿಧ ಕಾರಣಗಳಿಂದಾಗಿ ಫಲಾನುಭವಿಗಳು ಮನೆಗಳನ್ನು ಪಡೆಯಲು ಸಾಧ್ಯವಾಗಿಲ್ಲ. ಅತ್ಯಂತ ಕಡಿಮೆ ಮೊತ್ತದ ವಸತಿ ಯೋಜನೆಗಳಡಿ ಮನೆ ಕಟ್ಟಿಸುವುದಕ್ಕೂ ಸಾಧ್ಯವಿರಲಿಲ್ಲ. ಹೀಗಾಗಿ ಫಲಾನುಭವಿಗಳು ಮನೆಗಳನ್ನು ಕಟ್ಟಿಸಿಕೊಂಡಿರಲಿಲ್ಲ. ಕೆಲವು ಯೋಜನೆಗಳಡಿ ಮನೆಗಳು ಅಪೂರ್ಣವಾಗಿವೆ, ಇನ್ನು ಕೆಲವು ಯೋಜನೆಗಳಲ್ಲಿ ಮನೆಗಳ ನಿರ್ಮಾಣವೇ ಆರಂಭವಾಗಿಲ್ಲ. ಆದ್ದರಿಂದ ಇವೆಲ್ಲವನ್ನೂ ರದ್ದು ಮಾಡಿ ಹೊಸದಾಗಿ ಅರ್ಜಿ ಕರೆಯಲಾಗುವುದು. ಈ ರೀತಿ ಸುಮಾರು 2 ಲಕ್ಷ ಫಲಾನುಭವಿಗಳಿಗೆ ಮನೆ ಕಟ್ಟಿಸಿ ಕೊಡಲಾಗು ವುದು’ ಎಂದರು.