‘ಕೆಎಂಎಫ್ ವ್ಯಾಪ್ತಿಯ ಸಿಬ್ಬಂದಿಯು ಕೋವಿಡ್ ವೇಳೆ ಪ್ರಾಣವನ್ನೇ ಪಣಕ್ಕಿಟ್ಟು ಕಾರ್ಯನಿರ್ವಹಿಸಿದ್ದಾರೆ. ಬೆಳಿಗ್ಗೆ 4 ಗಂಟೆಯಿಂದಲೇ ಕೆಲಸ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹೀಗಾಗಿ, ಸಿಬ್ಬಂದಿಗೆ ಪ್ರತಿ ಲೀಟರ್ ಹಾಲಿಗೆ (ಖರೀದಿಯಾಗುವ) 20 ಪೈಸೆ ನೀಡುವ ಪ್ರಸ್ತಾವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ. ಇದಕ್ಕೆ ವಾರ್ಷಿಕ ₹ 50 ಕೋಟಿ ಬೇಕಾಗುತ್ತದೆ. ಈ ವರ್ಷ ಸರ್ಕಾರವೇ ಆ ವೆಚ್ಚ ಭರಿಸಲಿದೆ’ ಎಂದು ತಿಳಿಸಿದರು.