ಗಣಿಗಾರಿಕೆ ವೇಳೆ ಸ್ಪೋಟದಂತಹ ಅನಾಹುತ ತಪ್ಪಿಸಲು ಕಾರ್ಮಿಕರಿಗೆ ಸೂಕ್ತ ತರಬೇತಿ ಅಗತ್ಯವಿದೆ. ಅದಕ್ಕಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಚಿತ್ರದುರ್ಗದಲ್ಲಿ ಸ್ಕೂಲ್ ಆಪ್ ಮೈನಿಂಗ್ ಆರಂಭಿಸಲಾಗುವುದು. ಆ ಉದ್ದೇಶಕ್ಕಾಗಿ ಈಗಾಗಲೇ ಸಂಡೂರಿನಲ್ಲಿ 50 ಎಕರೆ ಜಮೀನು ಖರೀದಿಸಲಾಗಿದೆ. ಶೀಘ್ರ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಲಾಗುವುದು ಎಂದು ತಿಳಿಸಿದರು.