<p><strong>ಬಾಗಲಕೋಟೆ:</strong> ಅಕ್ರಮ ಗಣಿಗಾರಿಕೆ ತಡೆಯಲು ನಿರಂತರ ನಿಗಾ ವ್ಯವಸ್ಥೆಗಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ರೀತಿ ನಮ್ಮ ಇಲಾಖೆ ನೌಕರರಿಗೂ ಸಮವಸ್ತ್ರ ಹಾಗೂ ವಾಕಿಟಾಕಿ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿಗಾರಿಕೆ ಸ್ಥಳಗಳಲ್ಲಿ ಗಸ್ತು ಕಾರ್ಯಕ್ಕೆ ನಿವೃತ್ತ ಯೋಧರನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.</p>.<p>ಗಣಿಗಾರಿಕೆ ವೇಳೆ ಸ್ಪೋಟದಂತಹ ಅನಾಹುತ ತಪ್ಪಿಸಲು ಕಾರ್ಮಿಕರಿಗೆ ಸೂಕ್ತ ತರಬೇತಿ ಅಗತ್ಯವಿದೆ. ಅದಕ್ಕಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಚಿತ್ರದುರ್ಗದಲ್ಲಿ ಸ್ಕೂಲ್ ಆಪ್ ಮೈನಿಂಗ್ ಆರಂಭಿಸಲಾಗುವುದು. ಆ ಉದ್ದೇಶಕ್ಕಾಗಿ ಈಗಾಗಲೇ ಸಂಡೂರಿನಲ್ಲಿ 50 ಎಕರೆ ಜಮೀನು ಖರೀದಿಸಲಾಗಿದೆ. ಶೀಘ್ರ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಬೆಂಗಳೂರಿನಲ್ಲಿ ಏಪ್ರಿಲ್ 30ರಂದು ನನ್ನ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಗಣಿ ಅದಾಲತ್ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಅಕ್ರಮ ಗಣಿಗಾರಿಕೆ ತಡೆಯಲು ನಿರಂತರ ನಿಗಾ ವ್ಯವಸ್ಥೆಗಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ರೀತಿ ನಮ್ಮ ಇಲಾಖೆ ನೌಕರರಿಗೂ ಸಮವಸ್ತ್ರ ಹಾಗೂ ವಾಕಿಟಾಕಿ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿಗಾರಿಕೆ ಸ್ಥಳಗಳಲ್ಲಿ ಗಸ್ತು ಕಾರ್ಯಕ್ಕೆ ನಿವೃತ್ತ ಯೋಧರನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.</p>.<p>ಗಣಿಗಾರಿಕೆ ವೇಳೆ ಸ್ಪೋಟದಂತಹ ಅನಾಹುತ ತಪ್ಪಿಸಲು ಕಾರ್ಮಿಕರಿಗೆ ಸೂಕ್ತ ತರಬೇತಿ ಅಗತ್ಯವಿದೆ. ಅದಕ್ಕಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಚಿತ್ರದುರ್ಗದಲ್ಲಿ ಸ್ಕೂಲ್ ಆಪ್ ಮೈನಿಂಗ್ ಆರಂಭಿಸಲಾಗುವುದು. ಆ ಉದ್ದೇಶಕ್ಕಾಗಿ ಈಗಾಗಲೇ ಸಂಡೂರಿನಲ್ಲಿ 50 ಎಕರೆ ಜಮೀನು ಖರೀದಿಸಲಾಗಿದೆ. ಶೀಘ್ರ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಬೆಂಗಳೂರಿನಲ್ಲಿ ಏಪ್ರಿಲ್ 30ರಂದು ನನ್ನ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಗಣಿ ಅದಾಲತ್ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>