<p id="thickbox_headline"><strong>ಮೈಸೂರು: ‘</strong>ರಾಜ್ಯ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳಲ್ಲಿ ಶೇ 40 ರಷ್ಟು ಲಂಚ ಪಡೆಯಲಾಗುತ್ತಿದೆ ಎಂದು ದೂರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಎರಡು ದಿನದ ಹಿಂದೆ ಅವರ ಕಾರ್ಯಾಲಯವು ಪ್ರತಿಕ್ರಿಯಿಸಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ತಿಳಿಸಿದರು.</p>.<p>‘ಹತ್ತು ದಿನದೊಳಗೆ ಕೇಂದ್ರದಿಂದ ಪ್ರತಿನಿಧಿಯೊಬ್ಬರನ್ನು ಕಳುಹಿಸಿ, ಅವರಿಂದ ವರದಿ ಪಡೆದು ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಲಾಗಿದೆ‘ ಎಂದು ಹೇಳಿದರು. ಅವರು ನಗರದಲ್ಲಿ ಶುಕ್ರವಾರ ಜಿಲ್ಲಾ ಗುತ್ತಿಗೆದಾರರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಕಾಮಗಾರಿಗಳ ಗುಣಮಟ್ಟ ಕಳಪೆಯಾದರೆ, ಜನರು ಗುತ್ತಿಗೆದಾರರಿಗೆ ತರಾಟೆ ತೆಗೆದುಕೊಳ್ಳುತ್ತಾರೆ. ಆದರೆ, ಕಾಮಗಾರಿ ಹಂತದಲ್ಲಿನ ಭ್ರಷ್ಟಾಚಾರಗಳು ಅವರಿಗೆ ಗೊತ್ತಾಗುವುದಿಲ್ಲ. ಇದನ್ನು ಹತ್ತಿರದಿಂದ ಗಮನಿಸಿದ್ದ ನಾನು, ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎರಡು ಬಾರಿ ಪತ್ರ ಬರೆದು ಸಮಸ್ಯೆಗೆ ಸ್ಪಂದಿಸಲು ಕೋರಿದ್ದೆ. ಸೂಕ್ತ ಸ್ಪಂದನೆ ಸಿಗದಿದ್ದುದರಿಂದ ಪ್ರಧಾನಿಗೆ ಅವರಿಗೆ ಪತ್ರ ಬರೆದಿದ್ದೆ. ತಡವಾಗಿಯಾದರೂ ಅವರ ಕಾರ್ಯಾಲಯ ಸ್ಪಂದಿಸಿದೆ‘ ಎಂದರು.</p>.<p><strong>ಸಮಸ್ಯೆ ಬಗೆಹರಿಸಲು ಹೋರಾಟ: ‘</strong>ಗುತ್ತಿಗೆ ನೀಡುವ ಸಂದರ್ಭದಲ್ಲಿ ಪ್ಯಾಕೇಜ್ ಪದ್ಧತಿ ರದ್ದುಗೊಳಿಸಬೇಕು, ಜೇಷ್ಠತೆಯ ಆಧಾರದಲ್ಲಿ ಕಾಮಗಾರಿಗಳ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಘದಿಂದ ಮಂಡಿಸಿದ್ದ ಬೇಡಿಕೆಗೆ ಸ್ಪಂದಿಸಿರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿದೆ. ಪ್ಯಾಕೇಜ್ ಪದ್ಧತಿಯನ್ನು ರದ್ದು ಪಡಿಸಬೇಕು ಎಂದು ಸಂಘವು ಹೈಕೋರ್ಟ್ನ ಮೆಟ್ಟಿಲೇರಿದೆ. ಈ ಸಂಬಂಧ ಮಂಗಳವಾರ ತೀರ್ಪು ಹೊರಬೀಳುವ ನಿರೀಕ್ಷೆಯಿದೆ‘ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ಮೈಸೂರು: ‘</strong>ರಾಜ್ಯ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳಲ್ಲಿ ಶೇ 40 ರಷ್ಟು ಲಂಚ ಪಡೆಯಲಾಗುತ್ತಿದೆ ಎಂದು ದೂರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಎರಡು ದಿನದ ಹಿಂದೆ ಅವರ ಕಾರ್ಯಾಲಯವು ಪ್ರತಿಕ್ರಿಯಿಸಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ತಿಳಿಸಿದರು.</p>.<p>‘ಹತ್ತು ದಿನದೊಳಗೆ ಕೇಂದ್ರದಿಂದ ಪ್ರತಿನಿಧಿಯೊಬ್ಬರನ್ನು ಕಳುಹಿಸಿ, ಅವರಿಂದ ವರದಿ ಪಡೆದು ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಲಾಗಿದೆ‘ ಎಂದು ಹೇಳಿದರು. ಅವರು ನಗರದಲ್ಲಿ ಶುಕ್ರವಾರ ಜಿಲ್ಲಾ ಗುತ್ತಿಗೆದಾರರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಕಾಮಗಾರಿಗಳ ಗುಣಮಟ್ಟ ಕಳಪೆಯಾದರೆ, ಜನರು ಗುತ್ತಿಗೆದಾರರಿಗೆ ತರಾಟೆ ತೆಗೆದುಕೊಳ್ಳುತ್ತಾರೆ. ಆದರೆ, ಕಾಮಗಾರಿ ಹಂತದಲ್ಲಿನ ಭ್ರಷ್ಟಾಚಾರಗಳು ಅವರಿಗೆ ಗೊತ್ತಾಗುವುದಿಲ್ಲ. ಇದನ್ನು ಹತ್ತಿರದಿಂದ ಗಮನಿಸಿದ್ದ ನಾನು, ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎರಡು ಬಾರಿ ಪತ್ರ ಬರೆದು ಸಮಸ್ಯೆಗೆ ಸ್ಪಂದಿಸಲು ಕೋರಿದ್ದೆ. ಸೂಕ್ತ ಸ್ಪಂದನೆ ಸಿಗದಿದ್ದುದರಿಂದ ಪ್ರಧಾನಿಗೆ ಅವರಿಗೆ ಪತ್ರ ಬರೆದಿದ್ದೆ. ತಡವಾಗಿಯಾದರೂ ಅವರ ಕಾರ್ಯಾಲಯ ಸ್ಪಂದಿಸಿದೆ‘ ಎಂದರು.</p>.<p><strong>ಸಮಸ್ಯೆ ಬಗೆಹರಿಸಲು ಹೋರಾಟ: ‘</strong>ಗುತ್ತಿಗೆ ನೀಡುವ ಸಂದರ್ಭದಲ್ಲಿ ಪ್ಯಾಕೇಜ್ ಪದ್ಧತಿ ರದ್ದುಗೊಳಿಸಬೇಕು, ಜೇಷ್ಠತೆಯ ಆಧಾರದಲ್ಲಿ ಕಾಮಗಾರಿಗಳ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಘದಿಂದ ಮಂಡಿಸಿದ್ದ ಬೇಡಿಕೆಗೆ ಸ್ಪಂದಿಸಿರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿದೆ. ಪ್ಯಾಕೇಜ್ ಪದ್ಧತಿಯನ್ನು ರದ್ದು ಪಡಿಸಬೇಕು ಎಂದು ಸಂಘವು ಹೈಕೋರ್ಟ್ನ ಮೆಟ್ಟಿಲೇರಿದೆ. ಈ ಸಂಬಂಧ ಮಂಗಳವಾರ ತೀರ್ಪು ಹೊರಬೀಳುವ ನಿರೀಕ್ಷೆಯಿದೆ‘ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>