‘ಕಾಮಗಾರಿಗಳ ಗುಣಮಟ್ಟ ಕಳಪೆಯಾದರೆ, ಜನರು ಗುತ್ತಿಗೆದಾರರಿಗೆ ತರಾಟೆ ತೆಗೆದುಕೊಳ್ಳುತ್ತಾರೆ. ಆದರೆ, ಕಾಮಗಾರಿ ಹಂತದಲ್ಲಿನ ಭ್ರಷ್ಟಾಚಾರಗಳು ಅವರಿಗೆ ಗೊತ್ತಾಗುವುದಿಲ್ಲ. ಇದನ್ನು ಹತ್ತಿರದಿಂದ ಗಮನಿಸಿದ್ದ ನಾನು, ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎರಡು ಬಾರಿ ಪತ್ರ ಬರೆದು ಸಮಸ್ಯೆಗೆ ಸ್ಪಂದಿಸಲು ಕೋರಿದ್ದೆ. ಸೂಕ್ತ ಸ್ಪಂದನೆ ಸಿಗದಿದ್ದುದರಿಂದ ಪ್ರಧಾನಿಗೆ ಅವರಿಗೆ ಪತ್ರ ಬರೆದಿದ್ದೆ. ತಡವಾಗಿಯಾದರೂ ಅವರ ಕಾರ್ಯಾಲಯ ಸ್ಪಂದಿಸಿದೆ‘ ಎಂದರು.