ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ದಟ್ಟ ಮಂಜು: ಅಮಿತ್ ಶಾ ವಿಮಾನ ವಿಳಂಬ

Last Updated 16 ಜನವರಿ 2021, 7:32 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿಯಲ್ಲಿ ದಟ್ವವಾಗಿ ಮಂಜು ಆವರಿಸಿದ್ದ ಕಾರಣ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸಬೇಕಿದ್ದ ವಾಯುಪಡೆ ವಿಮಾನ ಟೇಕ್ ಆಫ್ ವಿಳಂಬವಾಗಿದೆ.

ಬೆಳಿಗ್ಗೆ 9 ಗಂಟೆ ಬದಲು 11.40ಕ್ಕೆ ವಿಮಾನ ಟೇಕ್ ಆಫ್ ಆಗಿದೆ. ಹೀಗಾಗಿ ಅಮಿತ್ ಶಾ ಬೆಂಗಳೂರು ತಲುಪುವುದು ಎರಡೂವರೆ ಗಂಟೆ ತಡವಾಗಲಿದ್ದು, ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.10ಕ್ಕೆ ತಲುಪಲಿದೆ.

ವಿಮಾನ ವಿಳಂಬ ಆಗಿರುವ ಕಾರಣ ವಿಕ್ಟೋರಿಯಾ ಆಸ್ಪತ್ರೆ ಕಾರ್ಯಕ್ರಮ ಮುಗಿಸಿ ಮುಖ್ಯಮಂತ್ರಿ ‌ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಗೆ ಮರಳಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಿಂದ ನೇರವಾಗಿ ಎಚ್​ಎಎಲ್​​​​ಗೆ ತೆರಳಿ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸ್ವಾಗತಿಸಬೇಕಿತ್ತು.

ಅಮಿತ್ ಶಾ ವಿಳಂಬವಾಗಿ ಬರುವ ಕಾರಣ ಭದ್ರಾವತಿಯಲ್ಲಿ ನಡೆಯಲಿರುವ ರ‌್ಯಾಪಿಡ್ ಆಕ್ಷನ್ ಫೋರ್ಸ್ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ಕಾರ್ಯಕ್ರಮ ಮತ್ತು ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮ ಮತ್ತು ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಬಿಜೆಪಿ ಪ್ರಮುಖರ ಸಭೆ ಕೂಡ‌ ನಿಗದಿತ ‌ಸಮಯಕ್ಕಿಂತ ವಿಳಂಬವಾಗಿ‌ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT