ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿಗೆ ರಾಜ್ಯ ಕೇಳಿರುವಷ್ಟು ಔಷಧಿಯನ್ನು ಪೂರೈಕೆ ಮಾಡಲು ಸಾಧ್ಯವಾಗಿಲ್ಲ, ಮುಂಬರುವ ದಿನಗಳಲ್ಲಿ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪು ಶಿಲೀಂಧ್ರಕ್ಕೆ 20 ಸಾವಿರ ವಯಲ್ಸ್ ಔಷಧ ನೀಡುವಂತೆ ರಾಜ್ಯ ಸರ್ಕಾರ ಇದೇ 14 ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಈಗಾಗಲೇ 1050 ವಯಲ್ಸ್ ಕಳಿಸಲಾಗಿದೆ. ಉಳಿದದ್ದನ್ನು ಆದಷ್ಟು ಬೇಗನೆ ಕಳಿಸುವುದಾಗಿ ಭರವಸೆ ನೀಡಿದರು.