ಶಾಸಕ ಜಗದೀಶ ಶೆಟ್ಟರ್, ‘ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಿಗೆ ಒಮ್ಮೆ ಗೆದ್ದ ಕ್ಷೇತ್ರದಲ್ಲಿ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಹೆದರಿಕೆ ಇದೆ ಅಂದರೆ, ಅವರ ವ್ಯಕ್ತಿತ್ವ ಎಂತಹದ್ದು ಎಂಬುದು ಅರ್ಥ ಆಗುತ್ತದೆ. ಬಾದಾಮಿಯಲ್ಲಿ ಕನಿಷ್ಠ ಮತಗಳ ಅಂತರದಿಂದ ಗೆದ್ದಿದ್ದ ಅವರು, ಅಲ್ಲಿ ಗೆದ್ದೂ ಸೋತಂತೆಯೇ ಆಗಿದ್ದರು. ಕಾಂಗ್ರೆಸ್ ಅಧೋಗತಿಗೆ ತಲುಪಿದೆ. ಏನೇ ಆದರೂ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.