ನಗರದಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿಗೆ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ಜಾರಕಿಹೊಳಿ ಸಹೋದರರು ಸೇರಿದಂತೆ, ಅನೇಕ ಮಂದಿ ಗೈರಾಗಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರ ಅವರ ವಿದೇಶ ಪ್ರವಾಸ ಮುಂಚೆಯೇ ನಿಗದಿಯಾಗಿತ್ತು. ಉಳಿದವರು ಬರಲೇಬೇಕು ಅಂತೇನಿಲ್ಲ. ರಾಷ್ಟ್ರೀಯ ಕಾರ್ಯಕಾರಿಣಿಗೂ ಕೇಂದ್ರ ಸಚಿವರು ಮತ್ತು ಸಂಸದರು ಗೈರಾಗುವುದು ಸಾಮಾನ್ಯ ಎಂದರು.