<p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ಬೆಂಗಳೂರಿನ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ಕಾಲೇಜು (ಯುವಿಸಿಇ) ಅನ್ನು ಪುಣೆಯ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಐಐಟಿ ಮಾದರಿಯಲ್ಲಿ ಸ್ವಾಯತ್ತ ಸಂಸ್ಥೆಯನ್ನಾಗಿ ಪರಿವರ್ತಿಸುವ ಉದ್ದೇಶದಿಂದ ವಿಧಾನಸಭೆಯಲ್ಲಿ ‘ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ, ಮಸೂದೆ 2021’ ಅನ್ನು ಮಂಡಿಸಲಾಯಿತು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಸೂದೆಯನ್ನು ಮಂಡಿಸಿದರು.</p>.<p>ಎಂಜಿನಿಯರಿಂಗ್ ಹಾಗೂ ಸಂಬಂಧಿತ ಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಉತ್ಕೃಷ್ಟ ಗುಣಮಟ್ಟಗಳನ್ನು ಹೊಂದಲು ಸಂಸ್ಥೆಯನ್ನು ಸಶಕ್ತಗೊಳಿಸುವ ಉದ್ದೇಶದಿಂದ ಸ್ವಾಯತ್ತತೆ ನೀಡಲು ಉದ್ದೇಶಿಸಲಾಗಿದೆ. ಅದಕ್ಕೆ ಪೂರಕವಾಗಿ ಸಂಸ್ಥೆಯ ಹೆಸರನ್ನು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಬದಲಿಸಲು ಮಸೂದೆಯಲ್ಲಿ ಪ್ರಸ್ತಾವಿಸಲಾಗಿದೆ.</p>.<p>ಈ ಸಂಸ್ಥೆಯನ್ನು ರಾಷ್ಟ್ರ ಮಟ್ಟದ ಎಂಜಿನಿಯರಿಂಗ್ ಕಾಲೇಜುಗಳಲ್ಲೇ ಅಗ್ರಸ್ಥಾನಕ್ಕೆ ಮೇಲ್ದರ್ಜೆಗೇರಿಸಲು ಸರ್ಕಾರ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚಿಸಿ, ವರದಿ ಪಡೆದ ಆಧಾರದಲ್ಲಿ ಮಸೂದೆ ರೂಪಿಸಲಾಗಿದೆ.</p>.<p><strong>ಮಸೂದೆಯ ಪ್ರಮುಖ ಅಂಶಗಳು</strong><br /><span class="Bullet">*</span>ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಸಂಬಂಧಿತ ಕಲೆ, ವಿಜ್ಞಾನ (ಭೌತಿಕ, ಸಾಮಾಜಿಕ ಮತ್ತು ಜೀವವಿಜ್ಞಾನ), ಅಂತರ್ ಶಿಸ್ತೀಯ ಅಧ್ಯಯನಗಳ ಎಲ್ಲಾ ಕ್ಷೇತ್ರದಲ್ಲಿ ಮತ್ತು ವಿಶ್ವವಿದ್ಯಾಲಯದ ಪ್ರಮುಖ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು.<br />* ಈ ಎಲ್ಲಾ ಕ್ಷೇತ್ರಗಳಲ್ಲಿ ಹೊಸ ಜ್ಞಾನ ಹಾಗೂ ಆವಿಷ್ಕಾರಕ್ಕೆ ಉತ್ತೇಜನ ನೀಡಲು ಹಾಗೂ ಜಾಗತಿಕ ನಾಯಕತ್ವವನ್ನು ಕಲ್ಪಿಸಲು ಸಂಶೋಧನೆ, ಪ್ರಕಟಣೆ, ಸಮಾಲೋಚನೆ ಹಾಗೂ ಸಲಹಾತ್ಮಕ ಚಟುವಟಿಕೆಗಳನ್ನು ನಡೆಸುವುದು.<br />*ರಾಷ್ಟ್ರ ಮತ್ತು ಅಂತರರಾಷ್ಟ್ರೀಯವಾಗಿ ಉತ್ತಮ ಪ್ರತಿಭೆಯುಳ್ಳ ವಿದ್ಯಾರ್ಥಿಗಳನ್ನು ಮತ್ತು ವ್ಯಾಸಂಗ ವಿಭಾಗದವರನ್ನು(ಫ್ಯಾಕಲ್ಟಿ) ಸೆಳೆಯುವುದು.<br />* ಉದ್ಯಮ ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಮತ್ತು ಅಂತರರಾಷ್ಟ್ರೀಯವಾಗಿ ಸಹಯೋಗದ ಮೂಲಕ ಕಾರ್ಯಕ್ರಮಗಳನ್ನು ರೂಪಿಸುವುದು.<br />* ಆನ್ಲೈನ್ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವುದು.<br />* ಎಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಂಬಂಧಿತ ಅಧ್ಯಯನ ಕ್ಷೇತ್ರಗಳಿಗೆ ಕ್ಯಾಂಪಸ್ ಮತ್ತು ಕೇಂದ್ರಗಳನ್ನು ಸ್ಥಾಪಿಸುವುದು.<br />*ಕ್ರಿಯಾಶೀಲ ಜಾಗತಿಕ ಪದ್ಧತಿಗಳಿಗೆ ಸರಿ ಹೊಂದುವ ಆವಿಷ್ಕಾರ ಎಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ಕಲೆ ರೂಪಿಸುವುದು.<br />*ನವನವೀನ ಮಾದರಿಯ ವಿದ್ಯಾರ್ಥಿ, ವ್ಯಾಸಂಗ ವಿಭಾಗ,ಪಾಲುದಾರ ಒಪ್ಪಂದವನ್ನು ರೂಪಿಸುವುದು ಮತ್ತು ಅವಶ್ಯಕವಾದಂತೆ ಮತ್ತು ಅವಶ್ಯಕವಾದ ನವನವೀನ ಜ್ಞಾನ ಕ್ಷೇತ್ರಗಳನ್ನು ಅನ್ವೇಷಿಸುವುದು.</p>.<p><strong>ಶಿವಮೊಗ್ಗದಲ್ಲಿ ಆಯುಷ್ ವಿವಿ: ಮಸೂದೆ ಮಂಡನೆ</strong><br />ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುವು ಮಾಡಿಕೊಡುವ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಮಸೂದೆ– 2021 ಅನ್ನು ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು.</p>.<p>ಶಿವಮೊಗ್ಗದ ಆಯುಷ್ ಕಾಲೇಜಿನಲ್ಲಿ ಇರುವ ಸೌಕರ್ಯಗಳನ್ನು ಬಳಸಿಕೊಳ್ಳುವುದರಿಂದ ₹20 ಕೋಟಿ ಅಂದಾಜು ವೆಚ್ಚ ಉಂಟಾಗುತ್ತದೆ ಹಾಗೂ ಈ ಹಂತದಲ್ಲಿ ಯಾವುದೇ ಹೆಚ್ಚಿನ ವೆಚ್ಚ ಉಂಟಾಗುವುದಿಲ್ಲ ಎಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಸಾರ್ವಜನಿಕ ಆರೋಗ್ಯ, ಆಯುಷ್ ಉದ್ಯಮ, ವೈದ್ಯಕೀಯ ಸಸ್ಯ ಸಂಪನ್ಮೂಲದ ಅಭಿವೃದ್ಧಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸರ್ಕಾರದ ಅಗತ್ಯಗಳನ್ನು ಪೂರೈಸುವುದಕ್ಕೆ ಶೈಕ್ಷಣಿಕ, ಸಂಶೋಧನೆ ಹಾಗೂ ತರಬೇತಿ ನೀಡಲು, ಆಯುಷ್ ಕ್ಷೇತ್ರದಲ್ಲಿ ಶ್ರೇಷ್ಠತೆಯ ವಿಶ್ವವಿದ್ಯಾಲಯವನ್ನಾಗಿ ಮಾಡುವ ಉದ್ದೇಶ ಇದೆ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ಬೆಂಗಳೂರಿನ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ಕಾಲೇಜು (ಯುವಿಸಿಇ) ಅನ್ನು ಪುಣೆಯ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಐಐಟಿ ಮಾದರಿಯಲ್ಲಿ ಸ್ವಾಯತ್ತ ಸಂಸ್ಥೆಯನ್ನಾಗಿ ಪರಿವರ್ತಿಸುವ ಉದ್ದೇಶದಿಂದ ವಿಧಾನಸಭೆಯಲ್ಲಿ ‘ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ, ಮಸೂದೆ 2021’ ಅನ್ನು ಮಂಡಿಸಲಾಯಿತು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಸೂದೆಯನ್ನು ಮಂಡಿಸಿದರು.</p>.<p>ಎಂಜಿನಿಯರಿಂಗ್ ಹಾಗೂ ಸಂಬಂಧಿತ ಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಉತ್ಕೃಷ್ಟ ಗುಣಮಟ್ಟಗಳನ್ನು ಹೊಂದಲು ಸಂಸ್ಥೆಯನ್ನು ಸಶಕ್ತಗೊಳಿಸುವ ಉದ್ದೇಶದಿಂದ ಸ್ವಾಯತ್ತತೆ ನೀಡಲು ಉದ್ದೇಶಿಸಲಾಗಿದೆ. ಅದಕ್ಕೆ ಪೂರಕವಾಗಿ ಸಂಸ್ಥೆಯ ಹೆಸರನ್ನು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಬದಲಿಸಲು ಮಸೂದೆಯಲ್ಲಿ ಪ್ರಸ್ತಾವಿಸಲಾಗಿದೆ.</p>.<p>ಈ ಸಂಸ್ಥೆಯನ್ನು ರಾಷ್ಟ್ರ ಮಟ್ಟದ ಎಂಜಿನಿಯರಿಂಗ್ ಕಾಲೇಜುಗಳಲ್ಲೇ ಅಗ್ರಸ್ಥಾನಕ್ಕೆ ಮೇಲ್ದರ್ಜೆಗೇರಿಸಲು ಸರ್ಕಾರ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚಿಸಿ, ವರದಿ ಪಡೆದ ಆಧಾರದಲ್ಲಿ ಮಸೂದೆ ರೂಪಿಸಲಾಗಿದೆ.</p>.<p><strong>ಮಸೂದೆಯ ಪ್ರಮುಖ ಅಂಶಗಳು</strong><br /><span class="Bullet">*</span>ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಸಂಬಂಧಿತ ಕಲೆ, ವಿಜ್ಞಾನ (ಭೌತಿಕ, ಸಾಮಾಜಿಕ ಮತ್ತು ಜೀವವಿಜ್ಞಾನ), ಅಂತರ್ ಶಿಸ್ತೀಯ ಅಧ್ಯಯನಗಳ ಎಲ್ಲಾ ಕ್ಷೇತ್ರದಲ್ಲಿ ಮತ್ತು ವಿಶ್ವವಿದ್ಯಾಲಯದ ಪ್ರಮುಖ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು.<br />* ಈ ಎಲ್ಲಾ ಕ್ಷೇತ್ರಗಳಲ್ಲಿ ಹೊಸ ಜ್ಞಾನ ಹಾಗೂ ಆವಿಷ್ಕಾರಕ್ಕೆ ಉತ್ತೇಜನ ನೀಡಲು ಹಾಗೂ ಜಾಗತಿಕ ನಾಯಕತ್ವವನ್ನು ಕಲ್ಪಿಸಲು ಸಂಶೋಧನೆ, ಪ್ರಕಟಣೆ, ಸಮಾಲೋಚನೆ ಹಾಗೂ ಸಲಹಾತ್ಮಕ ಚಟುವಟಿಕೆಗಳನ್ನು ನಡೆಸುವುದು.<br />*ರಾಷ್ಟ್ರ ಮತ್ತು ಅಂತರರಾಷ್ಟ್ರೀಯವಾಗಿ ಉತ್ತಮ ಪ್ರತಿಭೆಯುಳ್ಳ ವಿದ್ಯಾರ್ಥಿಗಳನ್ನು ಮತ್ತು ವ್ಯಾಸಂಗ ವಿಭಾಗದವರನ್ನು(ಫ್ಯಾಕಲ್ಟಿ) ಸೆಳೆಯುವುದು.<br />* ಉದ್ಯಮ ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಮತ್ತು ಅಂತರರಾಷ್ಟ್ರೀಯವಾಗಿ ಸಹಯೋಗದ ಮೂಲಕ ಕಾರ್ಯಕ್ರಮಗಳನ್ನು ರೂಪಿಸುವುದು.<br />* ಆನ್ಲೈನ್ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವುದು.<br />* ಎಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಂಬಂಧಿತ ಅಧ್ಯಯನ ಕ್ಷೇತ್ರಗಳಿಗೆ ಕ್ಯಾಂಪಸ್ ಮತ್ತು ಕೇಂದ್ರಗಳನ್ನು ಸ್ಥಾಪಿಸುವುದು.<br />*ಕ್ರಿಯಾಶೀಲ ಜಾಗತಿಕ ಪದ್ಧತಿಗಳಿಗೆ ಸರಿ ಹೊಂದುವ ಆವಿಷ್ಕಾರ ಎಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ಕಲೆ ರೂಪಿಸುವುದು.<br />*ನವನವೀನ ಮಾದರಿಯ ವಿದ್ಯಾರ್ಥಿ, ವ್ಯಾಸಂಗ ವಿಭಾಗ,ಪಾಲುದಾರ ಒಪ್ಪಂದವನ್ನು ರೂಪಿಸುವುದು ಮತ್ತು ಅವಶ್ಯಕವಾದಂತೆ ಮತ್ತು ಅವಶ್ಯಕವಾದ ನವನವೀನ ಜ್ಞಾನ ಕ್ಷೇತ್ರಗಳನ್ನು ಅನ್ವೇಷಿಸುವುದು.</p>.<p><strong>ಶಿವಮೊಗ್ಗದಲ್ಲಿ ಆಯುಷ್ ವಿವಿ: ಮಸೂದೆ ಮಂಡನೆ</strong><br />ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುವು ಮಾಡಿಕೊಡುವ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಮಸೂದೆ– 2021 ಅನ್ನು ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು.</p>.<p>ಶಿವಮೊಗ್ಗದ ಆಯುಷ್ ಕಾಲೇಜಿನಲ್ಲಿ ಇರುವ ಸೌಕರ್ಯಗಳನ್ನು ಬಳಸಿಕೊಳ್ಳುವುದರಿಂದ ₹20 ಕೋಟಿ ಅಂದಾಜು ವೆಚ್ಚ ಉಂಟಾಗುತ್ತದೆ ಹಾಗೂ ಈ ಹಂತದಲ್ಲಿ ಯಾವುದೇ ಹೆಚ್ಚಿನ ವೆಚ್ಚ ಉಂಟಾಗುವುದಿಲ್ಲ ಎಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಸಾರ್ವಜನಿಕ ಆರೋಗ್ಯ, ಆಯುಷ್ ಉದ್ಯಮ, ವೈದ್ಯಕೀಯ ಸಸ್ಯ ಸಂಪನ್ಮೂಲದ ಅಭಿವೃದ್ಧಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸರ್ಕಾರದ ಅಗತ್ಯಗಳನ್ನು ಪೂರೈಸುವುದಕ್ಕೆ ಶೈಕ್ಷಣಿಕ, ಸಂಶೋಧನೆ ಹಾಗೂ ತರಬೇತಿ ನೀಡಲು, ಆಯುಷ್ ಕ್ಷೇತ್ರದಲ್ಲಿ ಶ್ರೇಷ್ಠತೆಯ ವಿಶ್ವವಿದ್ಯಾಲಯವನ್ನಾಗಿ ಮಾಡುವ ಉದ್ದೇಶ ಇದೆ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>