ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಲೋಕಾಯಕ್ತ ಎನ್‌. ಆನಂದ ನಿವೃತ್ತಿ

Last Updated 16 ಡಿಸೆಂಬರ್ 2020, 20:15 IST
ಅಕ್ಷರ ಗಾತ್ರ

ಬೆಂಗಳೂರು: ಉಪ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಎನ್‌. ಆನಂದ ಅವರು ಐದು ವರ್ಷಗಳ ಸೇವಾವಧಿ ಪೂರ್ಣಗೊಳಿಸಿ ಬುಧವಾರ ನಿವೃತ್ತರಾದರು.

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯಾದ ಆನಂದ ಅವರು 2015ರ ಡಿಸೆಂಬರ್‌ 16ರಂದು ರಾಜ್ಯದ ಉಪ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್‌, ಲೋಕಾಯುಕ್ತದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಡಾ.ಎ.ಎಸ್‌.ಎನ್‌. ಮೂರ್ತಿ ಅವರು ಆನಂದ ಅವರ ಜತೆಗಿನ ಒಡನಾಟವನ್ನು ಸ್ಮರಿಸಿದರು.

ರಾಜ್ಯ ಲೋಕಾಯುಕ್ತದಲ್ಲಿ ಒಬ್ಬ ಲೋಕಾಯುಕ್ತ ಮತ್ತು ಇಬ್ಬರು ಉಪ ಲೋಕಾಯುಕ್ತರ ಹುದ್ದೆಗಳಿವೆ. ಈ ಪೈಕಿ ಆನಂದ ಅವರ ನಿವೃತ್ತಿಯಿಂದ ಒಂದು ಉಪ ಲೋಕಾಯುಕ್ತ ಹುದ್ದೆ ಖಾಲಿ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT