‘ಸರ್ಕಾರದ ನಿರ್ದೇಶನದಂತೆ ಸಭೆ ಕರೆದಿದ್ದೇನೆ ಎಂದು ಸಭಾಪತಿ ಹೇಳಿದ್ದರು. ಈಗ ಕಾರ್ಯದರ್ಶಿ ಹೇಳಿದಂತೆ ಸಭೆ ಕರೆದಿದ್ದಾರೆ. ಇದು ನ್ಯಾಯಸಮ್ಮತವಲ್ಲ. ಅದಕ್ಕೆ ಉಪಸಭಾಪತಿಯವರನ್ನು ಪೀಠದಲ್ಲಿ ಕೂರಿಸಿದ್ದೆವು. ಈಗ 14 ಜೆಡಿಎಸ್ ಸದಸ್ಯರು ಅವಿಶ್ವಾಸದ ಪತ್ರಕ್ಕೆ ಸಹಿ ಹಾಕಿದ್ದೇವೆ. ಪರಿಷತ್ ಅನಿರ್ದಿಷ್ಟಾವದಿಗೆ ಮುಂದೂಡಿರಬಹುದು. ಆದರೆ, ಈಗ ನೈತಿಕವಾಗಿ ಸಭಾಪತಿ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ ಮುಂದೆ ಮತ್ತೊಂದು ಸಭೆ ಕರೆದು ನಿರ್ಧರಿಸಬೇಕು ಎಂದೂ ಜೆಡಿಎಸ್ನ ಬಸವರಾಜ ಹೊರಟ್ಟಿ ಹೇಳಿದರು.