ವಿಧಾನ ಪರಿಷತ್ ಗಲಾಟೆ: ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ
ಬೆಂಗಳೂರು: ವಿಧಾನಪರಿಷತ್ನಲ್ಲಿ ನಡೆದ ಗದ್ದಲಕ್ಕೆ ಸಂಬಂಧಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಿರಿಯ ಸಚಿವರ ಸಭೆ ನಡೆಯುತ್ತಿದೆ.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಗೃಹಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ಸಚಿವರಾದ ಅಶೋಕ್, ಸೋಮಣ್ಣ ಸೇರಿದಂತೆ ಹಿರಿಯ ಸಚಿವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆಗಿನ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: ವಿಧಾನ ಪರಿಷತ್ನಲ್ಲಿ ಗದ್ದಲ: ಉಪ ಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ
ರಾಜಭವನನಕ್ಕೆ ತೆರಳಿ ದೂರು ನೀಡುವ ವಿಚಾರವಾಗಿ ಸಮಾಲೋಚನೆ ನಡೆಯುತ್ತಿದೆ.
‘ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದ ಕಾಂಗ್ರೆಸ್’: ‘ಮೇಲ್ಮನೆ ಅಂದರೆ ವಿದ್ಯಾವಂತರಿರುವುದು ಎಂಬ ನಂಬಿಕೆಯಿದೆ. ಅಲ್ಲಿ ಇಂತಹ ಗಲಾಟೆ ನಡೆದಿರುವುದು ಸರಿಯಲ್ಲ. ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದೂ ಸರಿಯಲ್ಲ. ಕಾಂಗ್ರೆಸ್ ಸದಸ್ಯರು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಾರೆ’ ಎಂದು ಸಚಿವ ಆರ್. ಅಶೋಕ ಟೀಕಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.