<p><strong>ಬೆಂಗಳೂರು</strong>: ‘ಯುಪಿಎಸ್ಸಿ ಪರೀಕ್ಷೆಗಳನ್ನು ಈ ಬಾರಿಯೂ ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಅ.10ರಂದು ಬೆಳಿಗ್ಗೆ 10.10ರಿಂದ ‘ಕನ್ನಡದಲ್ಲಿ ಯುಪಿಎಸ್ಸಿ’ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷಟಿ.ಎ.ನಾರಾಯಣಗೌಡ ತಿಳಿಸಿದರು.</p>.<p>‘ಅ.10ರಂದುಯುಪಿಎಸ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯಲ್ಲಿ ಕನ್ನಡಕ್ಕೆ ಮಾನ್ಯತೆ ನೀಡದೆ,ಕನ್ನಡಿಗರನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನೋಡಲಾಗುತ್ತಿದೆ. ಇದನ್ನು ಖಂಡಿಸಿಕನ್ನಡಿಗರ ಹಕ್ಕೊತ್ತಾಯದ ಸರಣಿ ಅಭಿಯಾನ ಆರಂಭಿಸಿದ್ದೇವೆ. ಈ ಮೂಲಕ ಕರ್ನಾಟಕದ ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲಿದ್ದೇವೆ’ ಎಂದರು.</p>.<p>‘ಅಭಿಯಾನದ ಭಾಗವಾಗಿ ಅ.10ರಂದು <strong>#ಕನ್ನಡದಲ್ಲಿUPSC,</strong> <strong>#UPSCInKannada</strong> ಎಂಬ ಹ್ಯಾಶ್ ಟ್ಯಾಗ್ ಬಳಸುವ ಮೂಲಕ ಟ್ವಿಟರ್ನಲ್ಲಿ ದನಿ ಎತ್ತಲಿದ್ದೇವೆ. ಅಭಿಯಾನದಲ್ಲಿ ರಾಜ್ಯದ ಜನ ಭಾಗವಹಿಸಬಹುದು. ಕೇಂದ್ರ ಸರ್ಕಾರದ ಎಲ್ಲ ಹಂತದ ಪರೀಕ್ಷೆಗಳೂ ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ವಿಚಾರ ಸಂಕಿರಣ, ಚಿತ್ರ ಚಳವಳಿ, ಪತ್ರ ಚಳವಳಿಗಳನ್ನೂ ಹಮ್ಮಿಕೊಳ್ಳಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಯುಪಿಎಸ್ಸಿ ಪರೀಕ್ಷೆಗಳನ್ನು ಈ ಬಾರಿಯೂ ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಅ.10ರಂದು ಬೆಳಿಗ್ಗೆ 10.10ರಿಂದ ‘ಕನ್ನಡದಲ್ಲಿ ಯುಪಿಎಸ್ಸಿ’ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷಟಿ.ಎ.ನಾರಾಯಣಗೌಡ ತಿಳಿಸಿದರು.</p>.<p>‘ಅ.10ರಂದುಯುಪಿಎಸ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯಲ್ಲಿ ಕನ್ನಡಕ್ಕೆ ಮಾನ್ಯತೆ ನೀಡದೆ,ಕನ್ನಡಿಗರನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನೋಡಲಾಗುತ್ತಿದೆ. ಇದನ್ನು ಖಂಡಿಸಿಕನ್ನಡಿಗರ ಹಕ್ಕೊತ್ತಾಯದ ಸರಣಿ ಅಭಿಯಾನ ಆರಂಭಿಸಿದ್ದೇವೆ. ಈ ಮೂಲಕ ಕರ್ನಾಟಕದ ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲಿದ್ದೇವೆ’ ಎಂದರು.</p>.<p>‘ಅಭಿಯಾನದ ಭಾಗವಾಗಿ ಅ.10ರಂದು <strong>#ಕನ್ನಡದಲ್ಲಿUPSC,</strong> <strong>#UPSCInKannada</strong> ಎಂಬ ಹ್ಯಾಶ್ ಟ್ಯಾಗ್ ಬಳಸುವ ಮೂಲಕ ಟ್ವಿಟರ್ನಲ್ಲಿ ದನಿ ಎತ್ತಲಿದ್ದೇವೆ. ಅಭಿಯಾನದಲ್ಲಿ ರಾಜ್ಯದ ಜನ ಭಾಗವಹಿಸಬಹುದು. ಕೇಂದ್ರ ಸರ್ಕಾರದ ಎಲ್ಲ ಹಂತದ ಪರೀಕ್ಷೆಗಳೂ ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ವಿಚಾರ ಸಂಕಿರಣ, ಚಿತ್ರ ಚಳವಳಿ, ಪತ್ರ ಚಳವಳಿಗಳನ್ನೂ ಹಮ್ಮಿಕೊಳ್ಳಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>