‘ಮುಖ್ಯಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶವಿದೆ. ಆದರೆ, ಮುಖ್ಯಪರೀಕ್ಷೆಗೆ ಅರ್ಹತೆ ಪಡೆಯಲು ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಲೇಬೇಕು.ಕನ್ನಡದಲ್ಲೇ ಪೂರ್ವಭಾವಿ ಪರೀಕ್ಷೆ ಬರೆಯುವ ಅವಕಾಶ ದೊರಕದ ಹೊರತು, ಮುಖ್ಯಪರೀಕ್ಷೆಯಲ್ಲಿ ಮಾತ್ರ ಕನ್ನಡ ಇದ್ದರೆ ಯಾವ ಪ್ರಯೋಜನವೂ ಆಗುವುದಿಲ್ಲ’ ಎಂದು ಶಾಸಕಿ ಸೌಮ್ಯಾ ರೆಡ್ಡಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.