ಬೆಂಗಳೂರು: ‘ಕೇಂದ್ರ ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ‘ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ’ ಪಟ್ಟಿಯಲ್ಲಿ ಬೆಂಗಳೂರು ಅಗ್ರಪಟ್ಟ ಅಲಂಕರಿಸಿದೆ. ಈ ಮಹಾನಗರದ ಪ್ರತಿಷ್ಠೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ನಾವೆಲ್ಲಾ ಮತ್ತಷ್ಟು ಮುತುವರ್ಜಿಯಿಂದ ಕೆಲಸ ಮಾಡಬೇಕು’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣಶನಿವಾರ ಹೇಳಿದರು.