ಮಕ್ಕಳು ಗೌರವ ಮತ್ತು ಆತ್ಮಾಭಿಮಾನದಿಂದ ಸಮವಸ್ತ್ರ ಧರಿಸಿ, ಶೂ ಮತ್ತು ಸಾಕ್ಸ್ ಹಾಕಿಕೊಂಡು ಹೆಮ್ಮೆಯಿಂದ ಶಾಲೆಗೆ ಹೋಗುತ್ತಿದ್ದರು. ಕನ್ನಡ ಶಾಲೆಗಳ ಮಕ್ಕಳು ಉಳಿದ ಖಾಸಗಿ ಶಾಲೆಗಳ ಮಕ್ಕಳಂತೆಯೇ ಸ್ವಾಭಿಮಾನದ, ಗೌರವಯುತ ಕಲಿಕಾ ವಾತಾವರಣದಲ್ಲಿ ಕಲಿಯುವ ಭೂಮಿಕೆಯನ್ನು ಒದಗಿಸಲಾಗಿತ್ತು. ಅವರ ಹಕ್ಕನ್ನು ಕಸಿದಿರುವ ಸರ್ಕಾರ ಮಕ್ಕಳು ಬರಿಗಾಲಿನಲ್ಲಿ ಹೋಗುವಂತೆ ಮಾಡಿದೆ ಎಂದು ವೇದಿಕೆಯ ಮಹಾ ಪೋಷಕ ನಿರಂಜನಾರಾಧ್ಯ.ವಿ.ಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.