‘ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಹೋರಾಟದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಯಾರು ಹಣ ನೀಡಿದ್ದಾರೆ. ಅದನ್ನು ಪಡೆದವರು ಯಾರು? ಹಣ ಯಾರ ಪಾಲಾಯಿತು ಎನ್ನುವುದು ಬಹಿರಂಗವಾಗಬೇಕಾಗಿದೆ. ರಾಜ್ಯ ರೈತ ಸಂಘದ ಮೇಲಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.