ರಾಣೆಬೆನ್ನೂರು (ಹಾವೇರಿ ಜಿಲ್ಲೆ): ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರ ಬಳಿ ಹೊಟ್ಟೆನೋವಿನ ಚಿಕಿತ್ಸೆಗೆ ಹೋದ ದಲಿತ, ಲಂಬಾಣಿ ಹಾಗೂ ಬಡ ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶ ತೆಗೆದು ಹಾಕಿದ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ 250ಕ್ಕೂ ಹೆಚ್ಚು ಮಹಿಳೆಯರು ರಾಣೆಬೆನ್ನೂರಿನಿಂದ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸಲು ಸೋಮವಾರ ಪಾದಯಾತ್ರೆ ಆರಂಭಿಸಿದರು.