ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶ್ರೀರಾಮುಲು ಅವರು ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರೊಂದಿಗೆ ಶಾಮೀಲಾಗಿ 27 ಎಕರೆ 5 ಗುಂಟೆ ಸರ್ಕಾರಿ ಜಮೀನು ಕಬಳಿಸಿರುವುದು ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಸಾಬೀತಾಗಿದೆ. ನ್ಯಾಯಾಲಯಕ್ಕೆ ಆರೋಪಪಟ್ಟಿಯೂ ಸಲ್ಲಿಕೆಯಾಗಿದೆ. ಬಿಜೆಪಿ ನಾಯಕರಿಗೆ ನೈತಿಕತೆ ಇದ್ದರೆ ರಾಮುಲು ಅವರನ್ನು ಸಂಪುಟದಿಂದ ಕೈಬಿಡಲಿ’ ಎಂದರು.