ಅಭಿವೃದ್ಧಿಪಡಿಸಿದ ಜಮೀನಿನಲ್ಲಿ ಶೇಕಡ 50ರಷ್ಟನ್ನು ಭೂಮಾಲೀಕರಿಗೆ ಪರಿಹಾರ ರೂಪದಲ್ಲಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ರೈತರಿಗೂ ಲಾಭ ಆಗಲಿದೆ. ಬೆಂಗಳೂರು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಗದಗ, ಹುಬ್ಬಳ್ಳಿ– ಧಾರವಾಡ, ಬಳ್ಳಾರಿ, ದಾವಣಗೆರೆ, ಮೈಸೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಎಚ್ಬಿ ವಸತಿ ಯೋಜನೆಗಳು ಶೀಘ್ರದಲ್ಲಿ ಪೂರ್ಣಗೊಳ್ಳಲಿವೆ ಎಂದು ತಿಳಿಸಿದರು.