‘ರಾಜ್ಯದ ಮಹಾಪುರುಷರ ಬಗ್ಗೆ ಸರ್ಕಾರಕ್ಕೆ ಅಪಾರವಾದ ಗೌರವವಿದೆ. ಸಾಹಿತ್ಯ, ಭಾಷೆ, ಸಂಸ್ಕೃತಿಗೆ ಪ್ರಥಮ ಆದ್ಯತೆ ನೀಡುತ್ತ ಬಂದಿದೆ. ಇವುಗಳ ವಿರುದ್ಧ ಧ್ವನಿಯತ್ತುವವರ ಬಗ್ಗೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡಿದೆ. ಹೀಗಾಗಿ, ಕರ್ನಾಟಕ ಬಂದ್ ನಡೆಸುವ ಅಗತ್ಯವಿಲ್ಲ. ಪ್ರತಿಭಟನೆ ಮಾಡಿ ಮತ್ತೊಮ್ಮೆ ಗೊಂದಲ ಸೃಷ್ಟಿಸುವುದು ಬೇಡ. ಸರ್ಕಾರದೊಂದಿಗೆ ಸಹಕರಿಸಿ’ ಎಂದು ಮನವಿ ಮಾಡಿದರು.