ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತಿಮ ಒಪ್ಪಿಗೆ ಸಿಕ್ಕ ಕೂಡಲೇ ಮಕ್ಕಳಿಗೆ ಲಸಿಕೆ: ಬಸವರಾಜ ಬೊಮ್ಮಾಯಿ

Last Updated 13 ಅಕ್ಟೋಬರ್ 2021, 19:36 IST
ಅಕ್ಷರ ಗಾತ್ರ

ಉಡುಪಿ: ‘ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಬಳಿಕ, 2 ವರ್ಷದಿಂದ 18 ವರ್ಷ ವಯಸ್ಸಿನೊಳಗಿನವರಿಗೆ ಲಸಿಕೆ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಕಾಪುವಿನ ಅದಮಾರಿನಲ್ಲಿ ಮಾತನಾಡಿದ ಅವರು, ‘ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ’ ಎಂದು ತಿಳಿಸಿದರು.

ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ವಿಚಾರವಾಗಿ ದಸರಾ ಮುಗಿದ ಕೂಡಲೇ ತಜ್ಞರ ಸಮಿತಿಯ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಇರುವ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ಮೌಲ್ಯಮಾಪನ ಮಾಡುತ್ತಿದ್ದಾರೆ. ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಸಂಬಂಧವೂ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು. ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದಾಖಲಿಸಿರುವ ಪ್ರಕರಣಗಳ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT